7:32 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ!

21/07/2022, 20:47

ಹಾಸನ(reporterkarnataka.com):
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ.

ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಪುತ್ರ ಹಾಗೂ ಇನ್ನೊಬ್ಬಳು ಪುತ್ರಿ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ ಮತ್ತು ಅಶ್ವಿನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಆರೋಪಿ ಈ ಹಿಂದೆ ಅಶ್ವಿನಿ ಮೇಲೆ ಹಲ್ಲೆ ಕೂಡ ನಡೆಸಿದ್ದನೆನ್ನಲಾಗಿದೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ದಾಖಲಿಸಿದ್ದಳು. ಜಗದೀಶ ಮೆಡಿಕಲ್ ಶಾಪ್ ಒಂದನ್ನು ತೆರೆದು ನಷ್ಟ ಅನುಭವಿಸಿ ಮುಚ್ಚಿದ್ದ. ಅಶ್ವಿನಿ ಬೇರೊಂದು ಔಷಧ ಮಳಿಗೆಯಲ್ಲಿ ಕೆಲಸಕ್ಕಿದ್ದರು.

ಈ ವೇಳೆ ಬೇರೊಬ್ಬ ಮಹಿಳೆ ಜೊತೆ ಜಗದೀಶ ಸಂಪರ್ಕ ಬೆಳೆಸಿದ್ದ. ಇದನ್ನು ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದು ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ ಅಶ್ವಿನಿ ಜೀವನಾಂಶ ಕೋರಿದ್ದರು. ಜೀವನಾಂಶ ನೀಡಬೇಕಾಗುವುದೆಂಬ ಕಾರಣಕ್ಕೆ ಪತ್ನಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದ.

ಜೀವನಾಂಶ ಕೇಳಿದ್ದರಿಂದ ರೊಚ್ಚಿಗೆದ್ದಿದ್ದ ಜಗದೀಶ ಬುಧವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದು ಪತ್ನಿಗೂ ಮೆಡಿಕಲ್ ಶಾಪ್ ಗೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಆಕೆಯನ್ನು ಊಟಕ್ಕೆಂದು ಮನೆಗೆ ಕರೆತಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಾಲೆ ಬಿಟ್ಟು ಮನೆಗೆ ಬಂದ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು