10:01 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾದಳೆಂದು ಪತ್ನಿಯನ್ನೇ ಚಾಕುನಿಂದ ಇರಿದು ಬರ್ಬರ ಕೊಲೆ!

21/07/2022, 20:47

ಹಾಸನ(reporterkarnataka.com):
ಪತಿಯೊಬ್ಬ ತನ್ನ ಪತ್ನಿಯನ್ನು ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹಾಸನದಲ್ಲಿ ನಡೆದಿದೆ.

ಕೊಲೆಯಾದ ಗೃಹಿಣಿಯನ್ನು ಅಶ್ವಿನಿ(36) ಎಂದು ಗುರುತಿಸಲಾಗಿದೆ. 17 ವರ್ಷದ ಹಿಂದೆ ಜಗದೀಶ್ ಜೊತೆ ಪ್ರೀತಿಸಿ ಅಶ್ವಿನಿ(36) ಅವರನ್ನು ಮದುವೆಯಾಗಿದ್ದ.

ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಒಬ್ಬ ಪುತ್ರ ಹಾಗೂ ಇನ್ನೊಬ್ಬಳು ಪುತ್ರಿ.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ಜಗದೀಶ ಮತ್ತು ಅಶ್ವಿನಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಆರೋಪಿ ಈ ಹಿಂದೆ ಅಶ್ವಿನಿ ಮೇಲೆ ಹಲ್ಲೆ ಕೂಡ ನಡೆಸಿದ್ದನೆನ್ನಲಾಗಿದೆ. ಈ ಸಂಬಂಧ ಆಕೆ ಪೊಲೀಸರಿಗೆ ದೂರು ದಾಖಲಿಸಿದ್ದಳು. ಜಗದೀಶ ಮೆಡಿಕಲ್ ಶಾಪ್ ಒಂದನ್ನು ತೆರೆದು ನಷ್ಟ ಅನುಭವಿಸಿ ಮುಚ್ಚಿದ್ದ. ಅಶ್ವಿನಿ ಬೇರೊಂದು ಔಷಧ ಮಳಿಗೆಯಲ್ಲಿ ಕೆಲಸಕ್ಕಿದ್ದರು.

ಈ ವೇಳೆ ಬೇರೊಬ್ಬ ಮಹಿಳೆ ಜೊತೆ ಜಗದೀಶ ಸಂಪರ್ಕ ಬೆಳೆಸಿದ್ದ. ಇದನ್ನು ವಿರೋಧಿಸಿದ್ದಕ್ಕೆ ಹಲವು ಬಾರಿ ಹಲ್ಲೆ ನಡೆಸಿದ್ದ. ಮಗಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದು ವಿಚ್ಛೇದನ ಕೋರಿ ಕೋರ್ಟ್‌ ಮೆಟ್ಟಿಲೇರಿದ ಅಶ್ವಿನಿ ಜೀವನಾಂಶ ಕೋರಿದ್ದರು. ಜೀವನಾಂಶ ನೀಡಬೇಕಾಗುವುದೆಂಬ ಕಾರಣಕ್ಕೆ ಪತ್ನಿ ಮಗಳನ್ನು ಮನೆಗೆ ಕರೆದುಕೊಂಡು ಬಂದಿದ್ದ.

ಜೀವನಾಂಶ ಕೇಳಿದ್ದರಿಂದ ರೊಚ್ಚಿಗೆದ್ದಿದ್ದ ಜಗದೀಶ ಬುಧವಾರ ಬೆಳಿಗ್ಗೆ ಮಕ್ಕಳನ್ನು ಶಾಲೆಗೆ ಬಿಟ್ಟು ಬಂದು ಪತ್ನಿಗೂ ಮೆಡಿಕಲ್ ಶಾಪ್ ಗೆ ಬಿಟ್ಟು ಬಂದಿದ್ದ. ಮಧ್ಯಾಹ್ನ ಆಕೆಯನ್ನು ಊಟಕ್ಕೆಂದು ಮನೆಗೆ ಕರೆತಂದು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಶಾಲೆ ಬಿಟ್ಟು ಮನೆಗೆ ಬಂದ ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಕಂಡು ಅಕ್ಕಪಕ್ಕದವರಿಗೆ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು