11:35 AM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ರಾಜಕೀಯ ಲಾಭಕ್ಕಾಗಿ ಬಿಜೆಪಿಯಿಂದ ಇಡಿ, ಐಟಿ ಬಳಕೆ: ಮಂಗಳೂರು ಪ್ರತಿಭಟನೆಯಲ್ಲಿ ಮಧು ಬಂಗಾರಪ್ಪ ಆರೋಪ

22/07/2022, 14:03

ಚಿತ್ರ :ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ಬ್ರಿಟಿಷರು ಒಡೆದು ಆಳುವ ಮೂಲಕ ನಮ್ಮೊಳಗೆ ಬಿರುಕು ತಂದರೆ, ಬಿಜೆಪಿ ಆಡಳಿತ ನಮ್ಮನ್ನು ಅಧೋಗತಿಗೆ ಇಳಿಸಿದೆ. ಕೇಂದ್ರ ಸರಕಾರ ಇಡಿ, ಐಟಿಯನ್ನು ರಾಜಕೀಯಕ್ಕಾಗಿ ಬಳಸುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಆಪಾದಿಸಿದರು.


ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಾವಶ್ಯಕವಾಗಿ ತೊಂದರೆ ನೀಡಲು ಇಡಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.


ಇಡಿ ವಿಚಾರಣೆ ನೆಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕಿರುಕುಳ ನೀಡಲಾಯಿತು. ಇದೀಗ ಸೋನಿಯಾ ಗಾಂಧಿ ಅವರ ವಿಚಾರಣೆ ನಡೆಸಲಾಗುತ್ತಿದೆ ಎಂದರು.


ಮಾಜಿ ಸಚಿವ ಬಿ. ರಮಾನಾಥ ರೈ ಅವರು ಮಾತನಾಡಿ, ಇಡಿ ವಿಚಾರಣೆಯ ನೆಪದಲ್ಲಿ ಬಿಜೆಪಿಯಿಂದ ಹೆದರಿಸುವ ಪ್ರಯತ್ನ ನಡೆಯುತ್ತಿದೆ. ಅದರೆ ನಾವು ಇದಕ್ಕೆಲ್ಲ ಹೆದರುವುದಿಲ್ಲ ಎಂದರು.


ಮಾಜಿ ಶಾಸಕರಾದ ಜೆ.ಆರ್. ಲೋಬೊ, ಐವನ್ ಡಿಸೋಜ, ಮಾಜಿ ಮೇಯರ್ ಗಳಾದ ಕವಿತಾ ಸನಿಲ್, ಶಶಿಧರ ಹೆಗ್ಡೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಯುವ ಕಾಂಗ್ರೆಸ್ಮುಂ ಅಧ್ಯಕ್ಷ ಮಿಥುನ್ತಾ ರೈ, ಕಾರ್ಪೊರೇಟರ್ಆ ಪ್ರವೀಣ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು