10:34 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಯೋಗವನ್ನು  ಶಿಕ್ಷಣದಲ್ಲಿ  ಅಳವಡಿಸಬೇಕು: ಮಂಗಳೂರು ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ 

21/06/2021, 22:29

ಮಂಗಳೂರು(reporterkarnataka news): ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ವತಿಯಿಂದ ಯೋಗ ದಿನಾಚರಣೆ ಜರುಗಿತು. 

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ 5 ಆಯಾಮಗಳಲ್ಲಿ ಕ್ಷೇಮಾಭಿವೃದ್ಧಿ ಯನ್ನು ಮಾಡುತ್ತದೆ. ಶಾರೀರಿಕ ಬೆಳವಣಿಗೆ ಮಾನಸಿಕ ಸ್ಥೈರ್ಯ ಆರೋಗ್ಯ ಭಾಗ್ಯ ಬೌದ್ಧಿಕ ಮಟ್ಟದ ಬೆಳವಣಿಗೆ ಸಾಮಾಜಿಕ ಸೌಹಾರ್ದತೆ ಹಾಗೂ ಆಧ್ಯಾತ್ಮಿಕತೆಗೆ  ಪೂರಕವಾಗಿದೆ.  ಇದನ್ನು ಶಿಕ್ಷಣ ದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು. 

ಮುಖ್ಯ ಅತಿಥಿಯಾಗಿ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರೊ. ಗಿರೀಶ್ ಚಂದ್ರ ಮಾತನಾಡಿ, ಶರೀರದ  ಮನಸ್ಸಿನ ಆತ್ಮದ ಜೊತೆಗೆ ನಡೆಸುವ ಸಂವಾದವೇ ಯೋಗ ಎಂದರು.
ಗೌರವ ಅತಿಥಿಯಾಗಿ  ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ  ಜಯಂತ ನಡುಬೈಲ್, ಕಾಲೇಜಿನ  ಪ್ರೊ. ಸಂಪತ್ ಶುಭ ಹಾರೈಸಿದರು. 


ಅಕ್ಷಯ ಕಾಲೇಜಿನ ರಾ.ಸೇ.ಯೋ  ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಣಮ್ಯ ಯೋಗಾಸನದ ವಿವಿಧ ಭಂಗಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್  ಮಾತನಾಡಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ನಮ್ಮ ಭಾರತ. ನಮ್ಮ ಹೆಮ್ಮೆ, ಯೋಗ ಒಂದು ಉತ್ಕೃಷ್ಟ ಜೀವನಶೈಲಿ ಎಂದರು. 
ಕೋವಿಡ್ ನೋಡಲ್ ಅಧಿಕಾರಿಗಳಾದ ಡಾ.ಶೇಸಪ್ಪ ಅಮೀನ್,ವನಿತ್ ಕುಮಾರ್,ಹಾಗೂ ಪ್ರವೀಣ್ ಶೆಟ್ಟಿ, ಯೋಗ ಗುರು ಹೇಮಾ ಚಂದ್ರ ಹಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು