2:16 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಯೋಗವನ್ನು  ಶಿಕ್ಷಣದಲ್ಲಿ  ಅಳವಡಿಸಬೇಕು: ಮಂಗಳೂರು ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ 

21/06/2021, 22:29

ಮಂಗಳೂರು(reporterkarnataka news): ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ವತಿಯಿಂದ ಯೋಗ ದಿನಾಚರಣೆ ಜರುಗಿತು. 

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ 5 ಆಯಾಮಗಳಲ್ಲಿ ಕ್ಷೇಮಾಭಿವೃದ್ಧಿ ಯನ್ನು ಮಾಡುತ್ತದೆ. ಶಾರೀರಿಕ ಬೆಳವಣಿಗೆ ಮಾನಸಿಕ ಸ್ಥೈರ್ಯ ಆರೋಗ್ಯ ಭಾಗ್ಯ ಬೌದ್ಧಿಕ ಮಟ್ಟದ ಬೆಳವಣಿಗೆ ಸಾಮಾಜಿಕ ಸೌಹಾರ್ದತೆ ಹಾಗೂ ಆಧ್ಯಾತ್ಮಿಕತೆಗೆ  ಪೂರಕವಾಗಿದೆ.  ಇದನ್ನು ಶಿಕ್ಷಣ ದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು. 

ಮುಖ್ಯ ಅತಿಥಿಯಾಗಿ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರೊ. ಗಿರೀಶ್ ಚಂದ್ರ ಮಾತನಾಡಿ, ಶರೀರದ  ಮನಸ್ಸಿನ ಆತ್ಮದ ಜೊತೆಗೆ ನಡೆಸುವ ಸಂವಾದವೇ ಯೋಗ ಎಂದರು.
ಗೌರವ ಅತಿಥಿಯಾಗಿ  ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ  ಜಯಂತ ನಡುಬೈಲ್, ಕಾಲೇಜಿನ  ಪ್ರೊ. ಸಂಪತ್ ಶುಭ ಹಾರೈಸಿದರು. 


ಅಕ್ಷಯ ಕಾಲೇಜಿನ ರಾ.ಸೇ.ಯೋ  ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಣಮ್ಯ ಯೋಗಾಸನದ ವಿವಿಧ ಭಂಗಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್  ಮಾತನಾಡಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ನಮ್ಮ ಭಾರತ. ನಮ್ಮ ಹೆಮ್ಮೆ, ಯೋಗ ಒಂದು ಉತ್ಕೃಷ್ಟ ಜೀವನಶೈಲಿ ಎಂದರು. 
ಕೋವಿಡ್ ನೋಡಲ್ ಅಧಿಕಾರಿಗಳಾದ ಡಾ.ಶೇಸಪ್ಪ ಅಮೀನ್,ವನಿತ್ ಕುಮಾರ್,ಹಾಗೂ ಪ್ರವೀಣ್ ಶೆಟ್ಟಿ, ಯೋಗ ಗುರು ಹೇಮಾ ಚಂದ್ರ ಹಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು