11:21 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಯೋಗವನ್ನು  ಶಿಕ್ಷಣದಲ್ಲಿ  ಅಳವಡಿಸಬೇಕು: ಮಂಗಳೂರು ವಿವಿ ಕುಲಪತಿ ಪ್ರೊ. ಯಡಪಡಿತ್ತಾಯ 

21/06/2021, 22:29

ಮಂಗಳೂರು(reporterkarnataka news): ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ರಾ.ಸೇ.ಯೋ. ಕೋಶದ ವತಿಯಿಂದ ಯೋಗ ದಿನಾಚರಣೆ ಜರುಗಿತು. 

ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ. ಎಸ್. ಯಡಪಡಿತ್ತಾಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯೋಗ 5 ಆಯಾಮಗಳಲ್ಲಿ ಕ್ಷೇಮಾಭಿವೃದ್ಧಿ ಯನ್ನು ಮಾಡುತ್ತದೆ. ಶಾರೀರಿಕ ಬೆಳವಣಿಗೆ ಮಾನಸಿಕ ಸ್ಥೈರ್ಯ ಆರೋಗ್ಯ ಭಾಗ್ಯ ಬೌದ್ಧಿಕ ಮಟ್ಟದ ಬೆಳವಣಿಗೆ ಸಾಮಾಜಿಕ ಸೌಹಾರ್ದತೆ ಹಾಗೂ ಆಧ್ಯಾತ್ಮಿಕತೆಗೆ  ಪೂರಕವಾಗಿದೆ.  ಇದನ್ನು ಶಿಕ್ಷಣ ದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯ ಎಂದರು. 

ಮುಖ್ಯ ಅತಿಥಿಯಾಗಿ ಸಂಸ್ಕೃತ ವಿಶ್ವವಿದ್ಯಾನಿಲಯದ ಪ್ರೊ. ಗಿರೀಶ್ ಚಂದ್ರ ಮಾತನಾಡಿ, ಶರೀರದ  ಮನಸ್ಸಿನ ಆತ್ಮದ ಜೊತೆಗೆ ನಡೆಸುವ ಸಂವಾದವೇ ಯೋಗ ಎಂದರು.
ಗೌರವ ಅತಿಥಿಯಾಗಿ  ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷ  ಜಯಂತ ನಡುಬೈಲ್, ಕಾಲೇಜಿನ  ಪ್ರೊ. ಸಂಪತ್ ಶುಭ ಹಾರೈಸಿದರು. 


ಅಕ್ಷಯ ಕಾಲೇಜಿನ ರಾ.ಸೇ.ಯೋ  ವಿದ್ಯಾರ್ಥಿನಿ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಪ್ರಣಮ್ಯ ಯೋಗಾಸನದ ವಿವಿಧ ಭಂಗಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತೋರಿಸಿಕೊಟ್ಟರು.


ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್  ಮಾತನಾಡಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ, ಇಡೀ ವಿಶ್ವಕ್ಕೆ ಯೋಗವನ್ನು ಪರಿಚಯಿಸಿದ್ದು ನಮ್ಮ ಭಾರತ. ನಮ್ಮ ಹೆಮ್ಮೆ, ಯೋಗ ಒಂದು ಉತ್ಕೃಷ್ಟ ಜೀವನಶೈಲಿ ಎಂದರು. 
ಕೋವಿಡ್ ನೋಡಲ್ ಅಧಿಕಾರಿಗಳಾದ ಡಾ.ಶೇಸಪ್ಪ ಅಮೀನ್,ವನಿತ್ ಕುಮಾರ್,ಹಾಗೂ ಪ್ರವೀಣ್ ಶೆಟ್ಟಿ, ಯೋಗ ಗುರು ಹೇಮಾ ಚಂದ್ರ ಹಾಸ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು