10:32 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಧರ್ಮ ಚಾವಡಿ ಸ್ವಾಮೀಜಿಯ ಆತ್ಮಹತ್ಯೆಗೆ ಕಾರಣ ಏನು ? ವ್ಯಾವಹಾರಿಕವಾಗಿ ಅವರು ಜಿಗುಪ್ಸೆಗೊಂಡಿದ್ದರೇ?

22/07/2022, 22:01

ಮಂಗಳೂರು(reporterkarnataka.com):

ಕಂದಾವರ ಪಂಚಾಯಿತಿಯ ಕೊಳಂಬೆ ಗ್ರಾಮದ ತಲಕಲ ಶೆಟ್ಟಿಪಾಲ್ ನ ‘ಧರ್ಮ ಚಾವಡಿ’ ಮಠದ ಶ್ರೀ ಕೃಷ್ಣ ದೇವಿ ಪ್ರಸಾದ ಸ್ವಾಮೀಜಿ (50) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಸಾವಿನ ಸುತ್ತ ಸಂಶಯದ ಹುತ್ತ ಬೆಳೆಯಲಾರಂಭಿಸಿದೆ. ವ್ಯಾವಹಾರಿಕವಾಗಿ ಜಿಗುಪ್ಸೆಗೊಂಡು ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸ್ವಾಮೀಜಿ ಶುಕ್ರವಾರ ಮುಂಜಾನೆ ಮಠದ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು

ಸುಮಾರು 5 ವರ್ಷದ ಹಿಂದೆ ಸಾಂಸರಿಕ ಜೀವನವನ್ನು ತ್ಯಜಿಸಿದ ಅವರು ಸನ್ಯಾಸಿ ದೀಕ್ಷೆ ಪಡೆದುಕೊಂಡಿದ್ದರು. ಬಳಿಕ ಅವರು ತಲಕಲದಲ್ಲಿನ ತಮ್ಮ ವಿಶಾಲವಾದ ಜಾಗದಲ್ಲಿ ಧರ್ಮ ಚಾವಡಿ ಸ್ಥಾಪಿಸಿ, ಮಠದಲ್ಲೇ ವಾಸಿಸುತ್ತಿದ್ದರು.

ಶುಕ್ರವಾರ ಮುಂಜಾನೆ ದೇವರಿಗೆ ಪೂಜೆ ಮಾಡಿದ ಬಳಿಕ ಸ್ವಾಮೀಜಿಯವರು ಕೋಣೆಯೊಳಗಡೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಕಳೆದ ವರ್ಷ ಧರ್ಮ ಚಾವಡಿಯಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಅದ್ದೂರಿಯ ಪೂಜಾ ಕಾರ್ಯ

ನಡೆಸಿದ್ದರು. ಮಠಕ್ಕೆ ಬರುವ ಭಕ್ತರಿಗೆ ಭವಿಷ್ಯ 

ಕೂಡ ಹೇಳುತ್ತಿದ್ದರು. ಇದರಿಂದ ಅವರು ಸಾಕಷ್ಟು

ಜನಪ್ರಿಯರಾಗಿದ್ದರು. ಧರ್ಮ ಚಾವಡಿಯ ಹೆಸರಲ್ಲಿ ಅಪಾರ ಪ್ರಮಾಣದ ಆಸ್ತಿ ಇದೆ ಎನ್ನಲಾಗಿದೆ. ವ್ಯವಹಾರಿಕವಾಗಿ ಜುಗುಪ್ಸೆ ಗೊಂಡು ಸ್ವಾಮೀಜಿ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.

ಸ್ವಾಮೀಜಿ ಆತ್ಮಹತ್ಯೆ ಬಗ್ಗೆ ಅವರ ಪೂರ್ವಾಶ್ರಮದ

ಪತ್ನಿ ಪ್ರಭಾ ಶೆಟ್ಟಿ ಬಜಪೆ ಪೋಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು