2:59 AM Wednesday23 - April 2025
ಬ್ರೇಕಿಂಗ್ ನ್ಯೂಸ್
Bangalore | ಪೆಹಲ್ಗಾಮ್ ನರಮೇಧ: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ… Water Metro | ಗುರುಪುರ- ನೇತ್ರಾವತಿ ನದಿಯಲ್ಲಿ ಮಂಗಳೂರು ವಾಟರ್ ಮೆಟ್ರೋ ಯೋಜನೆಗೆ ರಾಜ್ಯ… ಭಯೋತ್ಪಾದನೆ ವಿರುದ್ಧ ಹೋರಾಟದಲ್ಲಿ ಕೇಂದ್ರ ಸರಕಾರಕ್ಕೆ ಸಂಪೂರ್ಣ ಸಹಕಾರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ… ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದ ಜತೆಗೆ ನಿಲ್ಲುತ್ತೇವೆ; ರಾಜಕೀಯ ಮಾಡುವುದಿಲ್ಲ: ಉಪ… Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು…

ಇತ್ತೀಚಿನ ಸುದ್ದಿ

ಕುದ್ರೋಳಿ ದೇಗುಲ ಮುಂಭಾಗದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಶಾಸಕ ವೇದವ್ಯಾಸ ಕಾಮತ್ ಸೂಚನೆ 

23/07/2022, 12:40

ಮಂಗಳೂರು(reporterkarnataka.com): ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆ ಉನ್ನತೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು,  ಶಾಸಕ ವೇದವ್ಯಾಸ್ ಕಾಮತ್ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ‌ಕಾಮತ್, 75 ಲಕ್ಷ ರೂಪಾಯಿ ವೆಚ್ಚದಲ್ಲಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಮುಂಭಾಗದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತಿದ್ದು ಕಾಮಗಾರಿಗೆ ಮತ್ತಷ್ಟು ವೇಗ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು ಅಂತಿಮ ಹಂತದ ಕೆಲವೊಂದು ಕೆಲಸ ಬಾಕಿಯುಳಿದಿದೆ ಎಂದು ಹೇಳಿದರು. 

ಈ ರಸ್ತೆಯಲ್ಲಿದ್ದ ಹಳೆಯದಾದ ಒಳಚರಂಡಿ ಕೊಳವೆಗಳನ್ನು ಬದಲಾಯಿಸಿ ಹೊಸದಾಗಿ ಒಳಚರಂಡಿ ಜಾಲ ರಚಿಸಲಾಗಿದೆ. 24×7 ಕುಡಿಯುವ ನೀರು ಪೂರೈಸುವ ಜಲಸಿರಿ ಯೋಜನೆಯ ಹಾಗೂ ಗೈಲ್ ಗ್ಯಾಸ್ ಸಂಪರ್ಕದ ಪ್ರಮುಖ ಕೊಳವೆಗಳ ಅಳವಡಿಕೆ ಪೂರ್ಣಗೊಳಿಸಿ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ನಡೆಯುತ್ತಿದೆ. ಪಾದಾಚಾರಿ ರಸ್ತೆ ನಿರ್ಮಾಣ ಹಾಗೂ ರಸ್ತೆಯುದ್ದಕ್ಕೂ ದಾರಿದೀಪ ಅಳವಡಿಸಲು ಪ್ರತ್ಯೇಕವಾಗಿ ಅನುದಾನ ಬಿಡುಗಡೆಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕಾಮತ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಜಯಶ್ರೀ ಕುಡ್ವ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರಾದ ರವಿ ಶಂಕರ್ ಮಿಜಾರ್, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ಸಾಯಿರಾಮ್, ಬಿಜೆಪಿ ಮುಖಂಡರಾದ ರಮೇಶ್ ಹೆಗ್ಡೆ, ವಸಂತ್ ಜೆ ಪೂಜಾರಿ, ಅರುಣ್ ಶೇಟ್, ದಿನಕರ್ ಶೆಟ್ಟಿ, ಪ್ರವೀಣ್ ಕುದ್ರೋಳಿ, ಜನಾರ್ದನ ಕುಡ್ವ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು