10:30 PM Sunday21 - June 2026
ಬ್ರೇಕಿಂಗ್ ನ್ಯೂಸ್
ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ

ಇತ್ತೀಚಿನ ಸುದ್ದಿ

ಹಲವು ಕೌಶಲ್ಯಗಳ ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ: ಹಿರಿಯ ಪತ್ರಕರ್ತ ಬಾಳೆಪುಣಿ

23/07/2022, 21:27

ಮಂಗಳೂರು(reporterkarnataka.com): ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು.

ಶನಿವಾರ ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಪತ್ರಿಕೋದ್ಯಮ ವಿಭಾಗ ಸಹಯೋಗದಲ್ಲಿ ನಡೆದ ಇನ್ ಡಿಸೈನ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಪತ್ರಕರ್ತರು ಮುಖ್ಯವಾಗಿ ಸಂವಹನ ಕಲೆಯನ್ನು ಹೊಂದಿರಬೇಕು. ಪತ್ರಕರ್ತನಾದವನಿಗೆ ಕೇವಲ ಒಂದು ಕೌಶಲ್ಯ ಮಾತ್ರವಲ್ಲ ಹಲವು ಕೌಶಲ್ಯಗಳನ್ನು ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದರು.

ಪತ್ರಕರ್ತನಾದವನು ದೊಡ್ಡ ವ್ಯಕ್ತಿಗಳ ಬಗ್ಗೆ ಬರೆಯುವುದು ಮಾತ್ರವಲ್ಲದೇ, ಸಣ್ಣ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಬರೆಯುವುದರಿಂದ ಅವರೊಂದಿಗೆ ಪತ್ರಕರ್ತನ ಬೆಳವಣಿಗೆಯೂ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಮಾತನಾಡಿ ಪಠ್ಯದೊಂದಿಗೆ ಕೌಶಲ್ಯವು ಅಗತ್ಯವಿದ್ದು, ಒಬ್ಬ ವ್ಯಕ್ತಿಯನ್ನು ತಿದ್ದಿತೀಡಿದಾಗ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದ ಅವರು ತರಬೇತಿಯ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆಯಬೇಕು ಎಂದರು.

ವಿಜಯ ಕರ್ನಾಟಕ ಪತ್ರಿಕೆಯ ಉಪಸಂಪಾದಕ ಧರಣೇಶ್ ಕೆ.ಬಿ. ಅವರು ವಿದ್ಯಾರ್ಥಿಗಳಿಗೆ ಇನ್ ಡಿಸೈನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೊ. ಶಾಂತಿ ಉಪಸ್ಥಿತರಿದ್ದರು. ಚೇತನಾ ನಾಯಕ್ ಹಾಗೂ ಅಭಿಷೇಕ್ ಹೆಚ್.ಎಸ್. ಸಂಯೋಜಿಸಿದರು. ವಿದ್ಯಾರ್ಥಿಗಳಾದ ರಕ್ಷಿತಾ ನಿರೂಪಿಸಿದರು. ಶುಭಶ್ರೀ ಸ್ವಾಗತಿಸಿ, ಕಾವ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು