5:52 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಹಲವು ಕೌಶಲ್ಯಗಳ ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ: ಹಿರಿಯ ಪತ್ರಕರ್ತ ಬಾಳೆಪುಣಿ

23/07/2022, 21:27

ಮಂಗಳೂರು(reporterkarnataka.com): ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು.

ಶನಿವಾರ ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಪತ್ರಿಕೋದ್ಯಮ ವಿಭಾಗ ಸಹಯೋಗದಲ್ಲಿ ನಡೆದ ಇನ್ ಡಿಸೈನ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಪತ್ರಕರ್ತರು ಮುಖ್ಯವಾಗಿ ಸಂವಹನ ಕಲೆಯನ್ನು ಹೊಂದಿರಬೇಕು. ಪತ್ರಕರ್ತನಾದವನಿಗೆ ಕೇವಲ ಒಂದು ಕೌಶಲ್ಯ ಮಾತ್ರವಲ್ಲ ಹಲವು ಕೌಶಲ್ಯಗಳನ್ನು ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದರು.

ಪತ್ರಕರ್ತನಾದವನು ದೊಡ್ಡ ವ್ಯಕ್ತಿಗಳ ಬಗ್ಗೆ ಬರೆಯುವುದು ಮಾತ್ರವಲ್ಲದೇ, ಸಣ್ಣ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಬರೆಯುವುದರಿಂದ ಅವರೊಂದಿಗೆ ಪತ್ರಕರ್ತನ ಬೆಳವಣಿಗೆಯೂ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಮಾತನಾಡಿ ಪಠ್ಯದೊಂದಿಗೆ ಕೌಶಲ್ಯವು ಅಗತ್ಯವಿದ್ದು, ಒಬ್ಬ ವ್ಯಕ್ತಿಯನ್ನು ತಿದ್ದಿತೀಡಿದಾಗ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದ ಅವರು ತರಬೇತಿಯ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆಯಬೇಕು ಎಂದರು.

ವಿಜಯ ಕರ್ನಾಟಕ ಪತ್ರಿಕೆಯ ಉಪಸಂಪಾದಕ ಧರಣೇಶ್ ಕೆ.ಬಿ. ಅವರು ವಿದ್ಯಾರ್ಥಿಗಳಿಗೆ ಇನ್ ಡಿಸೈನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೊ. ಶಾಂತಿ ಉಪಸ್ಥಿತರಿದ್ದರು. ಚೇತನಾ ನಾಯಕ್ ಹಾಗೂ ಅಭಿಷೇಕ್ ಹೆಚ್.ಎಸ್. ಸಂಯೋಜಿಸಿದರು. ವಿದ್ಯಾರ್ಥಿಗಳಾದ ರಕ್ಷಿತಾ ನಿರೂಪಿಸಿದರು. ಶುಭಶ್ರೀ ಸ್ವಾಗತಿಸಿ, ಕಾವ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು