1:03 AM Sunday5 - April 2026
ಬ್ರೇಕಿಂಗ್ ನ್ಯೂಸ್
ಕೇರಳ ಚುನಾವಣೆಗೆ ಕರ್ನಾಟಕದ ಹಣ?: ತಿರುವನಂತಪುರದಲ್ಲಿ ಕಂತೆ ಕಂತೆ ನೋಟು ಸಮೇತ ಸಿಕ್ಕಿಬಿದ್ದ… ಚಾರಣಕ್ಕೆ ತೆರಳಿ 4 ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಟೆಕ್ಕಿ ಶರಣ್ಯ ಪತ್ತೆ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ…

ಇತ್ತೀಚಿನ ಸುದ್ದಿ

ಹಲವು ಕೌಶಲ್ಯಗಳ ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ: ಹಿರಿಯ ಪತ್ರಕರ್ತ ಬಾಳೆಪುಣಿ

23/07/2022, 21:27

ಮಂಗಳೂರು(reporterkarnataka.com): ಈಗಿನ ತಂತ್ರಜ್ಞಾನಕ್ಕೆ ಹೊಂದಿಕೊಂಡು ಕೇವಲ ಒಂದು ಕ್ಷೇತ್ರದಲ್ಲಿ ಅಲ್ಲದೇ ಎಲ್ಲಾ ಕ್ಷೇತ್ರಗಳಲ್ಲಿನ ಜ್ಞಾನವನ್ನು ಹೊಂದಿರುವವನು ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದು ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಎನ್.ಟಿ. ಗುರುವಪ್ಪ ಬಾಳೆಪುಣಿ ಹೇಳಿದರು.

ಶನಿವಾರ ನಗರದ ರಥಬೀದಿಯ ಡಾ.ಪಿ.ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಪತ್ರಿಕೋದ್ಯಮ ವಿಭಾಗ ಸಹಯೋಗದಲ್ಲಿ ನಡೆದ ಇನ್ ಡಿಸೈನ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. 

ಪತ್ರಕರ್ತರು ಮುಖ್ಯವಾಗಿ ಸಂವಹನ ಕಲೆಯನ್ನು ಹೊಂದಿರಬೇಕು. ಪತ್ರಕರ್ತನಾದವನಿಗೆ ಕೇವಲ ಒಂದು ಕೌಶಲ್ಯ ಮಾತ್ರವಲ್ಲ ಹಲವು ಕೌಶಲ್ಯಗಳನ್ನು ಹೊಂದಿದ್ದರೆ ಮಾತ್ರ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದರು.

ಪತ್ರಕರ್ತನಾದವನು ದೊಡ್ಡ ವ್ಯಕ್ತಿಗಳ ಬಗ್ಗೆ ಬರೆಯುವುದು ಮಾತ್ರವಲ್ಲದೇ, ಸಣ್ಣ ಮಟ್ಟದ ಪ್ರತಿಭೆಗಳನ್ನು ಗುರುತಿಸಿ ಬರೆಯುವುದರಿಂದ ಅವರೊಂದಿಗೆ ಪತ್ರಕರ್ತನ ಬೆಳವಣಿಗೆಯೂ ಸಾಧ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಜಯಕರ ಭಂಡಾರಿ ಎಂ. ಮಾತನಾಡಿ ಪಠ್ಯದೊಂದಿಗೆ ಕೌಶಲ್ಯವು ಅಗತ್ಯವಿದ್ದು, ಒಬ್ಬ ವ್ಯಕ್ತಿಯನ್ನು ತಿದ್ದಿತೀಡಿದಾಗ ಉತ್ತಮ ಪತ್ರಕರ್ತನಾಗಲು ಸಾಧ್ಯ ಎಂದ ಅವರು ತರಬೇತಿಯ ಪ್ರಯೋಜನವನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪಡೆಯಬೇಕು ಎಂದರು.

ವಿಜಯ ಕರ್ನಾಟಕ ಪತ್ರಿಕೆಯ ಉಪಸಂಪಾದಕ ಧರಣೇಶ್ ಕೆ.ಬಿ. ಅವರು ವಿದ್ಯಾರ್ಥಿಗಳಿಗೆ ಇನ್ ಡಿಸೈನ್ ಕಾರ್ಯಾಗಾರವನ್ನು ನಡೆಸಿಕೊಟ್ಟರು.


ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಪ್ರೊ. ಶಾಂತಿ ಉಪಸ್ಥಿತರಿದ್ದರು. ಚೇತನಾ ನಾಯಕ್ ಹಾಗೂ ಅಭಿಷೇಕ್ ಹೆಚ್.ಎಸ್. ಸಂಯೋಜಿಸಿದರು. ವಿದ್ಯಾರ್ಥಿಗಳಾದ ರಕ್ಷಿತಾ ನಿರೂಪಿಸಿದರು. ಶುಭಶ್ರೀ ಸ್ವಾಗತಿಸಿ, ಕಾವ್ಯ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು