3:42 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಪುತ್ರಿಯ ವಿರುದ್ಧ ಅಕ್ರಮ ಬಾರ್ ಆರೋಪ:  ಕಾಂಗ್ರೆಸ್ ಗೆ ಖಡಕ್ ತಿರುಗೇಟು ನೀಡಿದ ಕೇಂದ್ರ

24/07/2022, 01:40

ಹೊಸದಿಲ್ಲಿ(reporterkarnataka.com): ಕೇಂದ್ರ ಸಚಿವೆ ಸ್ಮೃತಿ ಇರಾನಿ ಪುತ್ರಿಗೋವಾದಲ್ಲಿ ಅಕ್ರಮವಾಗಿ ಬಾರ್​ ನಡೆಸುತ್ತಿದ್ದಾರೆಂದು ಕಾಂಗ್ರೆಸ್ ಆರೋಪಕ್ಕೆ ಸ್ಮೃತಿ ಇರಾನಿ ತಿರುಗೇಟು ನೀಡಿದ್ದಾರೆ.

ತಮ್ಮ ಮಗಳ ವಿರುದ್ಧ ಕೇಳಿ ಬಂದಿರುವ ಆರೋಪವನ್ನ ಸಚಿವೆ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಜೊತೆಗೆ ಕೋರ್ಟ್ ಮೂಲಕ ಇದಕ್ಕೆ ಉತ್ತರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಸೋನಿಯಾ ಹಾಗೂ ರಾಹುಲ್​ ಗಾಂಧಿ ವಿರುದ್ಧ ನಾನು ವಾಗ್ದಾಳಿ ನಡೆಸುತ್ತಿರುವ ಕಾರಣ ನನ್ನ ಮೇಲೆ ಇಂತಹ ಆರೋಪ ಮಾಡಲಾಗಿದೆ. ಕಾಂಗ್ರೆಸ್​​ ಆರೋಪದಲ್ಲಿ ಯಾವುದೇ ರೀತಿಯ ಹುರುಳಿಲ್ಲ . ಕೇವಲ 18 ವರ್ಷದ ಅಮಾಯಕ ಮಗಳ ಮೇಲೆ ಇಂತಹ ಆರೋಪ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದಕ್ಕೆ ಕೋರ್ಟ್ ಮೂಲಕ ಉತ್ತರ ನೀಡಲಾಗುವುದು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ 5,000 ಕೋಟಿ ರೂ. ಕಾಂಗ್ರೆಸ್ ಬಳಕೆ ಮಾಡಿಕೊಂಡಿದೆ. ಇದರಲ್ಲಿ ಸೋನಿಯಾ, ರಾಹುಲ್​ ಕೈವಾಡವಿದೆ. ಇದರ ಬಗ್ಗೆ ನಾನು ಮಾತನಾಡಿದ್ದಕ್ಕಾಗಿ ಇದೀಗ ನನ್ನ ಮಗಳ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. 18 ವರ್ಷದ ಮಗಳು ಮೊದಲ ವರ್ಷದ ಕಾಲೇಜು ವಿದ್ಯಾರ್ಥಿನಿಯಾಗಿದ್ದು,ಯಾವುದೇ ಬಾರ್​ ಹೊಂದಿಲ್ಲ ಎಂದಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ವಿರುದ್ಧ ಹೋರಾಡಿ ಗೆದ್ದಿರುವೆ. ಇದೀಗ 2024ರಲ್ಲಿ ಮತ್ತೊಮ್ಮೆ ಅಮೇಥಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತೇನೆ. ಧೈರ್ಯವಿದ್ದರೆ ರಾಹುಲ್ ಗಾಂಧಿ ಸ್ಪರ್ಧೆ ಮಾಡಲಿ ಎಂದು ಸವಾಲು ಕೂಡಾ ಹಾಕಿದ್ದಾರೆ.

ಇನ್ನು ಕಾಂಗ್ರೆಸ್‌ ಆರೋಪದ ಬಗ್ಗೆ ಕೇಂದ್ರ ಸಚಿವೆಯ ಪುತ್ರಿ ಝೋಯಿಷ್‌ ಇರಾನಿ ಪರ ವಕೀಲ ಕೀರತ್‌ ನಾಗ್ರಾ ಪ್ರತಿಕ್ರಿಯೆ ನೀಡಿದ್ದು, ನನ್ನ ಕಕ್ಷಿದಾರೆ ‘ಸಿಲ್ಲಿ ಸೋಲ್ಸ್‌ ಗೋವಾ’ ಎಂಬ ಯಾವುದೇ ರೆಸ್ಟೋರೆಂಟ್‌ನ ಮಾಲೀಕರಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಬರುತ್ತಿರುವ ಹಾಗೆ ಯಾವುದೇ ಶೋಕಾಸ್‌ ನೋಟಿಸ್‌ ಸಹ ಬಂದಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸ್ಮೃತಿ ಇರಾನಿ ಅವರ ವಿರುದ್ಧ ಮಾಡಿರುವ ರಾಜಕೀಯ ಪ್ರೇರಿತ ಆರೋಪವಿದು ಎಂದಿದ್ದರು.

ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ್ದ ಕಾಂಗ್ರೆಸ್ ಮುಖಂಡ ಜೈರಾಮ್​ ರಮೇಶ್, ಸ್ಮೃತಿ ಇರಾನಿ ಅವರ ಪುತ್ರಿ ಗೋವಾದಲ್ಲಿ ಬಾರ್ ನಡೆಸುತ್ತಿದ್ದು, ಅದಕ್ಕೆ ನಕಲಿ ಪರವಾನಗಿ ಪಡೆದುಕೊಂಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಕೇಂದ್ರ ಸಚಿವೆ ಸ್ಥಾನದಿಂದ ಅವರನ್ನ ವಜಾಗೊಳಿಸುವಂತೆ ಒತ್ತಾಯಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು