4:12 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!!

24/07/2022, 08:06

ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ.

ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದಾರೆ. ಅದನ್ನು ಕೂಡಲೇ ಕರಾವಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ತಿಮಿಂಗಿಲ ಹೊರಹಾಕಿದ್ದನ್ನು ವಶಕ್ಕೆ ಪಡೆದಿದ್ದಾರೆ. ಅದು ತಿಮಿಂಗಿಲದ ವಾಂತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜೀವ್‌ ಗಾಂಧಿ ಸೆಂಟರ್‌ ಆಫ್‌ ಬಯಾಟೆಕ್ನಾಲಜಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಿಮಿಂಗಿಲದ ವಾಂತಿಯನ್ನು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ವಾಂತಿಯ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ. ಆದ್ರೆ ಭಾರತದಲ್ಲಿ ತಿಮಿಂಗಿಲದ ವಾಂತಿಯನ್ನು ಖರೀದಿ ಅಥವಾ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು