12:23 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕೇರಳ ಸಮುದ್ರದಲ್ಲಿ ಸಿಕ್ಕಿತು ತಿಮಿಂಗಿಲ ವಾಂತಿ!: ಇದರ ಬೆಲೆ ಬರೋಬ್ಬರಿ 28 ಕೋಟಿ!!

24/07/2022, 08:06

ತಿರುವನಂತಪುರ(reporterkarnataka.com) ಕೇರಳ ಸಮೀಪದ ವಿಝಿಂಜಂನಲ್ಲಿ ಮೀನುಗಾರರ ಗುಂಪು 28 ಕೋಟಿ ರೂಪಾಯಿ ಮೌಲ್ಯದ ತಿಮಿಂಗಿಲದ ಅಂಬರ್ ‌ಗ್ರಿಸ್ ಅಥವಾ ವಾಂತಿಯನ್ನು ಪತ್ತೆ ಮಾಡಿದೆ.

ತಿಮಿಂಗಿಲದ ಈ ವಾಂತಿ ಬರೋಬ್ಬರಿ 28 ಕೆಜಿ 400 ಗ್ರಾಂ ತೂಕವಿತ್ತು. ಮೀನುಗಾರರು ಸಮುದ್ರದ ದಡಕ್ಕೆ ಎಳೆದು ತಂದಿದ್ದಾರೆ. ಅದನ್ನು ಕೂಡಲೇ ಕರಾವಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಧಿಕಾರಿಗಳು ತಿಮಿಂಗಿಲ ಹೊರಹಾಕಿದ್ದನ್ನು ವಶಕ್ಕೆ ಪಡೆದಿದ್ದಾರೆ. ಅದು ತಿಮಿಂಗಿಲದ ವಾಂತಿ ಹೌದೋ ಅಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ರಾಜೀವ್‌ ಗಾಂಧಿ ಸೆಂಟರ್‌ ಆಫ್‌ ಬಯಾಟೆಕ್ನಾಲಜಿಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದೆ.

ತಿಮಿಂಗಿಲದ ವಾಂತಿಯನ್ನು ಸುಗಂಧ ದ್ರವ್ಯಗಳ ತಯಾರಿಕೆಗೆ ಬಳಸಲಾಗುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಕೆಜಿ ವಾಂತಿಯ ಬೆಲೆ ಬರೋಬ್ಬರಿ ಒಂದು ಕೋಟಿ ರೂಪಾಯಿ. ಆದ್ರೆ ಭಾರತದಲ್ಲಿ ತಿಮಿಂಗಿಲದ ವಾಂತಿಯನ್ನು ಖರೀದಿ ಅಥವಾ ಮಾರಾಟ ಮಾಡದಂತೆ ನಿಷೇಧಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು