7:20 AM Thursday28 - May 2026
ಬ್ರೇಕಿಂಗ್ ನ್ಯೂಸ್
Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ…

ಇತ್ತೀಚಿನ ಸುದ್ದಿ

ಕೂಡ್ಲಗಿ: ಕಾಡು ಪ್ರಾಣಿಗಳ ಹಾವಳಿಯಿಂದ ಮೆಕ್ಕೆಜೋಳ, ಶೇಂಗಾ ಬೆಳೆ ಮೊಳಕೆಗೆ ಮುನ್ನವೇ ನಾಶ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತರು

24/07/2022, 15:02

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇನಹಳ್ಳಿ ಗ್ರಾಮದಲ್ಲಿ ಕಾಡು ಹಂದಿಗಳ ಹಿಂಡು ಕೃಷಿಕರ ಜಮೀನಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ ಹಾಗು ಶೇಂಗಾ ಬೆಳೆಗಳನ್ನು ನಾಶಮಾಡುತ್ತಿವೆ.


ಮೆಕ್ಕೆಜೋಳ ಬೆಳೆಯಲು 1 ಎಕರೆ ಜಮೀನಗೆ 2 ಪಾಕೇಟ್ ಬೀಜ,  2 ಚೀಲ ರಾಸಾಯನಿಕ ಗೊಬ್ಬರ, ಬಿತ್ತನೆ ಸೇರಿ ಸುಮಾರು 10 ಸಾವಿರ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಆದೇರೀತಿ ಶೇಂಗಾ ಬೆಳೆಯಲು 1ಎಕರೆ ಜಮೀನಗೆ 50kg ಬೀಜ, 2 ಚೀಲ ರಾಸಾಯನಿಕ ಗೊಬ್ಬರ ಬಿತ್ತನೆ ಸೇರಿ ಸೂಮಾರು 12 ಸಾವಿರ ರೂಪಾಯಿ ವೆಚ್ಚ ಮಾಡಿ ಬಿತ್ತನೆ ಮಾಡುತ್ತಾರೆ. ಬಿತ್ತನೆ ಮಾಡಿದ ಹೊಲದಲ್ಲಿ ಮೆಕ್ಕೆಜೋಳ ಹಾಗು ಶೇಂಗಾ ಬೀಜಗಳನ್ನು ಕಾಡುಹಂದಿಗಳು (ಮಿಕ) ನಾಶ (ಗೂರಿ) ಮಾಡಿ ರೈತರನ್ನು ಹೈರಾಣಗಿಸಿವೆ. ಬಹುತೇಕ ಕೃಷಿಕರ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೀಜಗಳನ್ನು ಕಾಡು ಹಂದಿಗಳು ನಾಶ ಮಾಡಿವೆ. ಬಿತ್ತನೆ ಮಾಡಿದ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಕಾಡು ಪ್ರಾಣಿಗಳಾದ ಕರಡಿ ಚಿರತೆ ದಾಳಿಗಳ ಆತಂಕ ನಡುವೆ ಕಾಡುಂದಿಗಳಿಂದ ಬಿತ್ತನೆ ಮಾಡಿದ ದಿನದಿಂದ ಮೊಳಕೆ ಹೊಡೆಯುವತನಕ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಜಾಗರಣೆ ಮಾಡಿ, ಧ್ವನಿವರ್ಧಕ ಎಣ್ಣೆ ಡಬ್ಬಿಗಳ ಶಬ್ದಗಳ ಮೂಲಕ ಬೆದರಿಸಿ ಬೆಳೆಗಳನ್ನು ರಕ್ಷಣೆ  ಮಾಡಬೇಕಾಗಿದೆ.  ಮೊದಲೆಲ್ಲಾ ಅರಣ್ಯ ದಂಚಿನ ಕೃಷಿ ಜಮೀನುಗಳಲ್ಲಿ ಮಾತ್ರ ಕಾಡು ಪ್ರಾಣಿಗಳ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಆದರೆ ಈಗ ಎಲ್ಲಾ ಪ್ರದೇಶದ ಜಮೀನುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಕಂಡುಬರುತ್ತದೆ.  ಬಿತ್ತನೆ  ಬೀಜದಿಂದ ಆಧಿಯಾಗಿ ಬೆಳೆಗಳ ಸಂರಕ್ಷಸಲು ಪರಿ ಪರಿಯಾದ ಸಮಸ್ಯೆಗಳು ಕೃಷಿಕರಿಗೆ ತಂದೊಡ್ಧಿದೆ. ಇದು ಬಹಳ ತೆಲೆನೋವಾಗಿ ಕಾಡುತ್ತಿದೆ. ನಾಶವಾದ ಬೆಳೆಗಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದ ಇನ್ನಿತರ ಸೌಲಭ್ಯ ಗಳು ಮಾಹಿತಿಗಳು ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಕಾರಣ ಮಾಹಿತಿ ಕೊರತೆಯಿಂದ  ಸಂಕಷ್ಟಗಳು ತಪ್ಪಿದ್ದಲ್ಲ. ಅದ್ದರಿಂದ ಸಂಭಂದ ಪಟ್ಟ ಇಲಾಖಾಧಿಕರಿಗಳು, ರೈತರಿಗೆ ಮಾಹಿತಿ ತಿಳಿಸುವುದರ ಜೊತೆಗೆ  ರೈತರ ನೆರವುಗೆ ದಾವಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು