9:57 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೂಡ್ಲಗಿ: ಕಾಡು ಪ್ರಾಣಿಗಳ ಹಾವಳಿಯಿಂದ ಮೆಕ್ಕೆಜೋಳ, ಶೇಂಗಾ ಬೆಳೆ ಮೊಳಕೆಗೆ ಮುನ್ನವೇ ನಾಶ; ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ರೈತರು

24/07/2022, 15:02

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇನಹಳ್ಳಿ ಗ್ರಾಮದಲ್ಲಿ ಕಾಡು ಹಂದಿಗಳ ಹಿಂಡು ಕೃಷಿಕರ ಜಮೀನಗಳಲ್ಲಿ ಬಿತ್ತನೆ ಮಾಡಿದ ಮೆಕ್ಕೆಜೋಳ ಹಾಗು ಶೇಂಗಾ ಬೆಳೆಗಳನ್ನು ನಾಶಮಾಡುತ್ತಿವೆ.


ಮೆಕ್ಕೆಜೋಳ ಬೆಳೆಯಲು 1 ಎಕರೆ ಜಮೀನಗೆ 2 ಪಾಕೇಟ್ ಬೀಜ,  2 ಚೀಲ ರಾಸಾಯನಿಕ ಗೊಬ್ಬರ, ಬಿತ್ತನೆ ಸೇರಿ ಸುಮಾರು 10 ಸಾವಿರ ರೂಪಾಯಿ ವೆಚ್ಚ ಮಾಡಬೇಕಾಗುತ್ತದೆ. ಆದೇರೀತಿ ಶೇಂಗಾ ಬೆಳೆಯಲು 1ಎಕರೆ ಜಮೀನಗೆ 50kg ಬೀಜ, 2 ಚೀಲ ರಾಸಾಯನಿಕ ಗೊಬ್ಬರ ಬಿತ್ತನೆ ಸೇರಿ ಸೂಮಾರು 12 ಸಾವಿರ ರೂಪಾಯಿ ವೆಚ್ಚ ಮಾಡಿ ಬಿತ್ತನೆ ಮಾಡುತ್ತಾರೆ. ಬಿತ್ತನೆ ಮಾಡಿದ ಹೊಲದಲ್ಲಿ ಮೆಕ್ಕೆಜೋಳ ಹಾಗು ಶೇಂಗಾ ಬೀಜಗಳನ್ನು ಕಾಡುಹಂದಿಗಳು (ಮಿಕ) ನಾಶ (ಗೂರಿ) ಮಾಡಿ ರೈತರನ್ನು ಹೈರಾಣಗಿಸಿವೆ. ಬಹುತೇಕ ಕೃಷಿಕರ ಜಮೀನುಗಳಲ್ಲಿ ಬಿತ್ತನೆ ಮಾಡಿದ ಬೀಜಗಳನ್ನು ಕಾಡು ಹಂದಿಗಳು ನಾಶ ಮಾಡಿವೆ. ಬಿತ್ತನೆ ಮಾಡಿದ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಕಾಡು ಪ್ರಾಣಿಗಳಾದ ಕರಡಿ ಚಿರತೆ ದಾಳಿಗಳ ಆತಂಕ ನಡುವೆ ಕಾಡುಂದಿಗಳಿಂದ ಬಿತ್ತನೆ ಮಾಡಿದ ದಿನದಿಂದ ಮೊಳಕೆ ಹೊಡೆಯುವತನಕ ಬೀಜಗಳನ್ನು ರಕ್ಷಣೆ ಮಾಡಲು ರಾತ್ರಿಯಿಡೀ ಜಾಗರಣೆ ಮಾಡಿ, ಧ್ವನಿವರ್ಧಕ ಎಣ್ಣೆ ಡಬ್ಬಿಗಳ ಶಬ್ದಗಳ ಮೂಲಕ ಬೆದರಿಸಿ ಬೆಳೆಗಳನ್ನು ರಕ್ಷಣೆ  ಮಾಡಬೇಕಾಗಿದೆ.  ಮೊದಲೆಲ್ಲಾ ಅರಣ್ಯ ದಂಚಿನ ಕೃಷಿ ಜಮೀನುಗಳಲ್ಲಿ ಮಾತ್ರ ಕಾಡು ಪ್ರಾಣಿಗಳ ಬೆಳೆಗಳನ್ನು ನಾಶ ಮಾಡುತ್ತಿದ್ದವು. ಆದರೆ ಈಗ ಎಲ್ಲಾ ಪ್ರದೇಶದ ಜಮೀನುಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಕಂಡುಬರುತ್ತದೆ.  ಬಿತ್ತನೆ  ಬೀಜದಿಂದ ಆಧಿಯಾಗಿ ಬೆಳೆಗಳ ಸಂರಕ್ಷಸಲು ಪರಿ ಪರಿಯಾದ ಸಮಸ್ಯೆಗಳು ಕೃಷಿಕರಿಗೆ ತಂದೊಡ್ಧಿದೆ. ಇದು ಬಹಳ ತೆಲೆನೋವಾಗಿ ಕಾಡುತ್ತಿದೆ. ನಾಶವಾದ ಬೆಳೆಗಳಿಗೆ ಪರಿಹಾರ ಸಿಗುತ್ತಿಲ್ಲ. ಸರ್ಕಾರದ ಇನ್ನಿತರ ಸೌಲಭ್ಯ ಗಳು ಮಾಹಿತಿಗಳು ರೈತರಿಗೆ ಸರಿಯಾಗಿ ತಲುಪುತ್ತಿಲ್ಲ. ಕಾರಣ ಮಾಹಿತಿ ಕೊರತೆಯಿಂದ  ಸಂಕಷ್ಟಗಳು ತಪ್ಪಿದ್ದಲ್ಲ. ಅದ್ದರಿಂದ ಸಂಭಂದ ಪಟ್ಟ ಇಲಾಖಾಧಿಕರಿಗಳು, ರೈತರಿಗೆ ಮಾಹಿತಿ ತಿಳಿಸುವುದರ ಜೊತೆಗೆ  ರೈತರ ನೆರವುಗೆ ದಾವಿಸಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು