6:12 PM Sunday27 - July 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ

ಇತ್ತೀಚಿನ ಸುದ್ದಿ

ಪುಷ್ಪ ಸಿನಿಮಾದ ಸ್ಟೈ ಲ್ ನಲ್ಲಿ ಬೆಂಗಳೂರಿಗೆ ಗಾಂಜಾ ಸಪ್ಲೈ: ಮಂಗಳೂರು ಮೂಲದ ಇಬ್ಬರ ಬಂಧನ

24/07/2022, 19:23

ಮಂಗಳೂರು(reporterkarnataka.com): ಪುಷ್ಪ ಸಿನಿಮಾ ಸ್ಟೈಲ್‌ನಲ್ಲಿ ಬೊಲೇರೋ ವಾಹನದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ 7 ಮಂದಿ ಆರೋಪಿಗಳನ್ನು ಬೆಂಗಳೂರಿನ ಬೇಗೂರು ಪೊಲೀಸರು ಬಂಧಿಸಿದ್ದಾರೆ.

ಬೊಲೇರೋ ಗೂಡ್ಸ್ ವಾಹನದ ಲಗೇಜ್ ಇಡುವ ಪ್ಲಾಟ್‌ಫಾರಂ ಕೆಳಭಾಗದಲ್ಲಿ ದೊಡ್ಡ ಬಾಕ್ಸ್ ಮಾಡಿಕೊಂಡು ಅದರಲ್ಲಿ ಗಾಂಜಾ ಅಡಗಿಸಿಟ್ಟು ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಾಟ ಮಾಡುತ್ತಿದ್ದರು.

ಬಂಧಿತರಲ್ಲಿ ಇಬ್ಬರು ಮಂಗಳೂರು ಮೂಲದವರೆಂದು ತಿಳಿದು ಬಂದಿದೆ. ಬಂಧಿತರಿಂದ 1 ಕೋಟಿ ರೂ ಮೌಲ್ಯದ 175 ಕೆ.ಜಿ. ಗಾಂಜಾ ವಶಕ್ಕೆ ಪಡೆದಿದ್ದಾರೆ.

ಬಂಧಿತರನ್ನು ಅರವಿಂದ್, ಪವನ್, ಪ್ರಭು, ಪ್ರಸಾದ್, ಪತ್ತಿ ಸಾಯಿಚಂದ್ರ ಪ್ರಕಾಶ್, ಅಮ್ಮದ್ ಇತಿಯಾರ್, ನಜೀಮ್ ಎಂದು ಗುರುತಿಸಲಾಗಿದೆ.

ಬಂಧಿತರಲ್ಲಿ ಅಮ್ಮದ್ ಇತಿಯಾರ್, ನಜೀಮ್ ಮಂಗಳೂರು ಮೂಲದವರು, ಆ ಪೈಕಿ ನಜೀಂ ರೌಡಿಶೀಟರ್ ಆಗಿದ್ದು, ಸದ್ಯ ಬಾಡಿ ವಾರಂಟ್ ಮೂಲಕ ಕೊಣಾಜೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇವರು ಬೆಂಗಳೂರಿಗೆ ತಂದು ಅಲ್ಲಿಂದ ಕಾಲೇಜು, ಪಬ್, ಕಬ್ 3 ಗಳಿಗೆ ಆಟೋ ರಿಕ್ಷಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇದೀಗ ಆರೋಪಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ. ಪುಷ್ಪ ಸಿನಿಮಾದಿಂದ ಪ್ರೇರಣೆಗೊಂಡು ಗಾಂಜಾ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು