10:40 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಬಹು ಬೇಡಿಕೆಯ ತಾರೆ ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಗುಡ್ ಬೈ? ರಾಜಕೀಯ ಎಂಟ್ರಿ ಕೊಡುತ್ತಾರಾ ಕೊಡಗಿನ ಬೆಡಗಿ?

24/07/2022, 19:35

ಬೆಂಗಳೂರು(reporterkarnataka.com): ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆಯಲ್ಲಿರು ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಗುಡ್ ಬೈ ಹೇಳುತ್ತಾರಾ? ಅಂತಹದ್ದೊಂದು ಗುಸು ಗುಸು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಹಾಗಾದರೆ ಸಿನಿಮಾ ಬಿಟ್ಟು ಮಂದಣ್ಣ ಏನು ಮಾಡುತ್ತಾರೆ ಎಂಬ ಜಿಜ್ಞಾಸೆ ಆರಂಭವಾಗಿದೆ.

ಸದ್ಯ ಸ್ಟಾರ್ ನಟಿಯಾಗಿ ಮರೆಯುತ್ತಿರುವ ರಶ್ಮಿಕಾ ಮಂದಣ್ಣ ಸದ್ಯ ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಸಾಲು ಸಾಲು ಬ್ಯುಸಿಯಾಗಿದ್ದಾರೆ. ಈ ನಡುವೆ ಮತ್ತೊಂದು ಹೊಸ ವಿಚಾರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು, ರಶ್ಮಿಕಾ ಮಂದಣ್ಣ ಚಿತ್ರರಂಗಕ್ಕೆ ಬೈ ಹೇಳಿ, ರಾಜಕೀಯಕ್ಕೆ ಎಂಟ್ರಿ ಆಗಲಿದ್ದಾರೆ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕನ್ನಡದ ಕಿರಿಕ್ ಪಾರ್ಟಿ ಚಿತ್ರದ ಮೂಲಕ ಬಣ್ಣದ ಬದುಕು ಆರಂಭಿಸಿದ ನಟಿ ಈಗ ಬಾಲಿವುಡ್ ಮತ್ತು ದಕ್ಷಿಣ ಭಾರತದ ಟಾಪ್ ನಟಿಯರಲ್ಲಿ ಒಬ್ಬರಾಗಿ ನೇಮು ಫೇಮು ಗಿಟ್ಟಿಸಿಕೊಂಡಿದ್ದಾರೆ. ಪುಷ್ಪ ಸಿನಿಮಾದ ಬಳಿಕ ಮತ್ತಷ್ಟು ಡಿಮ್ಯಾಂಡ್ ಗಿಟ್ಟಿಸಿಕೊಂಡ ರಶ್ಮಿಕಾ, ರಾಜಕೀಯ ಅಖಾಡಕ್ಕೆ ಧುಮುಖಲಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ. ಆದರೆ ಹೀಗಂತ ರಶ್ಮಿಕಾ ಹೇಳಿದ್ದಲ್ಲಾ. ತೆಲುಗಿನ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ರಶ್ಮಿಕಾ ಬಗ್ಗೆ ಭವಿಷ್ಯ ನುಡಿದಿರುವ ವೇಣು ಸ್ವಾಮಿ, ಕಾಂಗ್ರೆಸ್ ಪಕ್ಷ ಸೇರಲಿರುವ ರಶ್ಮಿಕಾ ಕರ್ನಾಟಕದಿಂದ ಸಂಸದೆಯಾಗಿ ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆ ಎಂದಿದ್ದಾರೆ. ರಶ್ಮಿಕಾ ಬಗ್ಗೆ ತೆಲುಗಿನ ಖ್ಯಾತ ಜ್ಯೋತಿಷಿ ವೇಣು ಸ್ವಾಮಿ ಮಾಡಿರುವ ಮಾತುಗಳು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇತ್ತೀಚೆಗೆ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ವೇಣು ಸ್ವಾಮಿ ರಶ್ಮಿಕಾ ಶೀಘ್ರದಲ್ಲೇ ರಾಜಕೀಯಕ್ಕೆ ಬರಲಿದ್ದಾರೆ ಎಂದು ಹೇಳಿದ್ದಾರೆ.

ವೇಣು ಸ್ವಾಮಿ ಸೆಲೆಬ್ರಿಟಿಗಳ ಜಾತಕವನ್ನು ನೋಡಿ ಹೇಳುವುದರಲ್ಲಿ ಎತ್ತಿದ ಕೈ. ಈಗ ರಶ್ಮಿಕಾ ಕುರಿತು ಹೇಳಿರುವ ಈ ಭವಿಷ್ಯ ನಿಜವಾಗುತ್ತಾ ಅಂತ ಕಾದು ನೋಡಬೇಕಿದೆ. ಸಿನಿಮಾರಂಗದಲ್ಲಿ ಸಿಕ್ಕಾಪಟ್ಟೆ ಖ್ಯಾತಿಗಳಿಸಿರುವ ರಶ್ಮಿಕಾ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ ಎನ್ನುವ ಕುತೂಹಲ ಹೆಚ್ಚಾಗಿದೆ.

ಅಂದಹಾಗೆ ರಶ್ಮಿಕಾ ಹೈದರಾಬಾದ್ ಮನೆಯ ಪೂಜೆಯನ್ನು ಇದೇ ಜ್ಯೋತಿಷಿ ವೇಣು ಸ್ವಾಮಿ ಮಾಡಿದ್ದರು. ಅಲ್ಲದೆ ರಕ್ಷಿತ್ ಜೊತೆ ದೂರ ಆಗಲು ಕಾರಣ ಸಹ ಇದೇ ವೇಣು ಸ್ವಾಮಿ. ರಕ್ಷಿತ್ ಜೊತೆ ಜಾತಕ ಹೊಂದಾಣಿಕೆಯಾಗದ ಕಾರಣ ಬ್ರೇಕಪ್ ಮಾಡಿಕೊಳ್ಳುವುದು ಒಳ್ಳೆಯದೆಂದು ಸಲಹೆ ನೀಡಿದ್ದೆ. ಹಾಗಾಗಿ ದೂರ ಆಗುವ ನಿರ್ಧಾರ ಮಾಡಿದರು ಎಂದು ವೇಣು ಸ್ವಾಮಿ ಹೇಳಿದ್ದಾರೆ.

ಈ ಹಿಂದೆ ಜ್ಯೋತಿಷಿ ವೇಣು ಗೋಪಾಲ್ ಸಮಂತಾ ಮತ್ತು ನಾಗಚೈತನ್ಯ ಬೇರೆ ಬೇರೆ ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರಂತೆ. ಈಗ ಹಾಗೆ ಆಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು