11:04 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು