8:51 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು