8:54 PM Monday22 - September 2025
ಬ್ರೇಕಿಂಗ್ ನ್ಯೂಸ್
ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ…

ಇತ್ತೀಚಿನ ಸುದ್ದಿ

ಸರಕಾರದಿಂದ ಹಸಿರು ಪೀಠಕ್ಕೆ ಅಪಿಡವಿಟ್: ಕಸ್ತೂರಿರಂಗನ್ ವರದಿ ವಿರೋಧಿಸಿ ಕೆಜಿಎಫ್ ನೀಡಿದ್ದ ಬಂದ್ ವಾಪಸ್ 

25/07/2022, 16:05

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಲೆನಾಡಿನ ಜನಜೀವನದ ಉಳಿವಿಗಾಗಿ ಕಸ್ತೂರಿ ರಂಗನ್ ವರದಿ ವಿರೋಧಿಸಿ  ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟ ಹಾಗೂ ಹೋರಾಟ ಸಮಿತಿ ನೀಡಿದ್ದ ಜಿಲ್ಲಾ ಬಂದ್ ಅನ್ನು ವಾಪಾಸ್ ಪಡೆಯಲಾಗಿದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ ಹೇಳಿದರು.

ಅವರು ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಮೂಡಿಗೆರೆ ತಾಲ್ಲೂಕಿನಲ್ಲಿ 26 ಗ್ರಾಮಗಳ ವ್ಯಾಪ್ತಿಯ ಪ್ರದೇಶಗಳು ಸೂಕ್ಷ್ಮ ವಲಯ ವ್ಯಾಪ್ತಿಗೆ ಒಪಡಿಸಲಾಗಿದ್ದು, ಇದರಿಂದ ಮಲೆನಾಡಿನ  ಜನ ಜೀವನದ ಬಗ್ಗೆ ಅತೀವ ಪರಿಣಾಮ ಬೀರಿದ್ದು ಕಸ್ತೂರಿರಂಗನ್ ವರದಿಯಿಂದ  ಕಾಫಿ, ಅಡಿಕೆ, ಏಲಕ್ಕಿ, ಕಾಳುಮೆಣಸು ಬೆಳೆಗಾರರ ಬಡ ರೈತರ ಕೂಲಿ ಕಾರ್ಮಿಕರ ಅನ್ನದ ಬಟ್ಟಲನ್ನು ಕಸಿದು ಕೊಳ್ಳಲು ಮುಂದಾಗಿದೆ. ಇದರಿಂದ  ಕೆಜಿಎಫ್ ಹಾಗೂ ಕಸ್ತೂರಿರಂಗನ್ ವರದಿ ವಿರೋಧಿ ಹೋರಾಟ ಸಮಿತಿಯು ಜುಲೈ 29 ಚಿಕ್ಕಮಗಳೂರು ಜಿಲ್ಲೆಯನ್ನು ಸಂಪೂರ್ಣ ಬಂದ್ ಮಾಡಲು ತೀರ್ಮಾನಿಸಲಾಗಿತ್ತು .ಇದನ್ನರಿತ ರಾಜ್ಯ ಸರ್ಕಾರ  ಕಸ್ತೂರಿ ರಂಗನ್ ವರದಿ ಜಾರಿಗೆ ತರದಂತೆ ತಡೆಯಲು ಸಭೆ ನಡೆಸಿ ಮುಖ್ಯಮಂತ್ರಿಗಳ ನಿಯೋಗವು ದಿಲ್ಲಿಯ ಪರಿಸರ ಇಲಾಖೆ ಮುಖಾಂತರ  ಹಸಿರು ಪೀಠಕ್ಕೆ ಅಪಿಡವಿಟ್ ಸಲ್ಲಿಸಿದೆ. ಸರ್ಕಾರದ  ಈ ನಿರ್ಧಾರವನ್ನು ಕೆಜಿಎಫ್ ಹಾಗೂ ಹೋರಾಟ ಸಮಿತಿಯು ಸ್ವಾಗತಿಸಿದೆ. ಇದರಿಂದ ಕಸ್ತೂರಿರಂಗನ್ ವರದಿ ವಿರೋಧಿಸಿ ನಡೆಯಬೇಕಾಗಿದ್ದ  ಚಿಕ್ಕಮಗಳೂರು ಜಿಲ್ಲಾ ಬಂದ್ ಅನ್ನು ತಾತ್ಕಾಲಿಕವಾಗಿ ಸದ್ಯಕ್ಕೆ  ಹಿಂಪಡೆದಿದ್ದೇವೆ. ಕಸ್ತೂರಿರಂಗನ್ ವರದಿ ವಿರೋಧಿಸಿ ಹೋರಾಟಗಳು ಜಯ ಸಿಗುವವರೆಗೂ ಮುಂದುವರೆಯುತ್ತವೆ’ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು