9:45 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸಲು ಸಾಧ್ಯ: ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.

25/07/2022, 22:13

ಮಂಗಳೂರು(reporterkarnataka.com): ಕ್ಯಾನ್ಸರ್ ಗುಣಪಡಿಸಲಾರದ ರೋಗವೇನೂ ಅಲ್ಲ. ರೋಗ ಪತ್ತೆ ಶೀಘ್ರವಾಗಿ ಮಾಡಿದಲ್ಲಿ ಕ್ಯಾನ್ಸರ್ ಕಾಯಿಲೆಯನ್ನು ಗುಣಪಡಿಸಲು ಸಾಧ್ಯ ಎಂದು ಕಸ್ತೂರಬಾ ಮೆಡಿಕಲ್ ಕಾಲೇಜಿನ ಡಾ.ಪ್ರಶಾಂತ್ ಬಿ.ಹೇಳಿದರು.

ಅವರು ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಕದ್ರಿಯ ಲಯನ್ಸ್ ಕ್ಲಬ್ ಜಂಟಿಯಾಗಿ ಆಯೋಜಿಸಿದ ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಕುಳಿತೇ ಇರುವ ಜೀವನ ಶೈಲಿ, ವಿಟಮಿನ್ , ಜೀವಸತ್ವಗಳ ಕೊರತೆ, ದುರ್ಬಲವಾದ ರೋಗನಿರೋಧಕ ಶಕ್ತಿ , ಅನುವಂಶೀಯತೆ – ಹೀಗೆ ಹಲವು ಕಾರಣಗಳಿಂದ ಕ್ಯಾನ್ಸರ್ ಬರಲು ಸಾಧ್ಯವಿದೆ. ಆದಷ್ಟು ಹೊರಗಿನ ಆಹಾರಗಳಿಗೆ ಮೊರೆ ಹೋಗದೆ, ಪೌಷ್ಟಿಕಾಹಾರ ಸೇವನೆ, ಲಘು ವ್ಯಾಯಾಮ, ಒಂದಷ್ಟು ನಡಿಗೆ- ಹೀಗೆ ಜೀವನಶೈಲಿ ಯನ್ನು ಬದಲಿಸಿಕೊಂಡಲ್ಲಿ ಕ್ಯಾನ್ಸರ್ ನ್ನು ತಡೆಯಲು ಸಾಧ್ಯ ಎಂದು ಅವರು ಹೇಳಿದರು.

ಕ್ಯಾನ್ಸರ್ ನ ಗುಣಲಕ್ಷಣಗಳು, ಅದರ ಚಿಕಿತ್ಸೆ, ತಡೆಗಟ್ಟುವ ಬಗೆ ಇತ್ಯಾದಿಗಳ ಬಗ್ಗೆ ಸವಿವರವಾದ ಮಾಹಿತಿಗಳನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿಯನ್ನು ಮೂಡಿಸಿದರು.

ಕೆನರಾ ಕಾಲೇಜಿನ ರಾ.ಸೇ.ಯೋ.ಅಧಿಕಾರಿಗಳಾದ ಸೀಮಾ ಪ್ರಭು,ವಾಣಿ ಯು.ಎಸ್. ಹಾಗೂ ಕದ್ರಿ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಸುಮಿತ್ರಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಲಯನ್ ಶ್ರೀಧರ್, ಲಯನ್ ರಿತೇಶ್ ರಾವ್, ಲಯನ್ ಸತೀಶನ್, ಲಯನ್ ಪ್ರಶಾಂತ್ ಪೈ,ಲಯನ್ ಅಶೋಕ್ ಕಾಮತ್, ಲಯನ್ ವಿದ್ಯಾ ಕಾಮತ್ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.


ಅಭಿನ್ ಬಂಗೇರ ಸ್ವಾಗತಿಸಿದರು.ಪ್ರತೀಶ್ ಮಲ್ಲಿ ವಂದಿಸಿದರು.ಶರಣ್ಯ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು