10:42 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳಲು ಸಾಮಾಜಿಕ ಅಂತರ, ಸ್ವಚ್ಛತೆ, ಲಸಿಕೆಯೇ ಶ್ರೀರಕ್ಷೆ: ಶಾಸಕ ಕಾಮತ್

22/06/2021, 09:00

ಮಂಗಳೂರು(reporterkarnataka news): ಕೋವಿಡ್ ಸೋಂಕಿನಿಂದ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸಾಮಾಜಿಕ ಅಂತರ, ಸ್ವಚ್ಛತೆ ಹಾಗೂ ಲಸಿಕೆ ಪಡೆಯುವ ಮೂಲಕ ರಕ್ಷಣೆ ಪಡೆಯಬೇಕು ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದರು. 

ಸಂಘ ನಿಕೇತನದಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ವತಿಯಿಂದ ನಡೆದ ಮೊದಲ‌ ಹಂತದ ಉಚಿತ ಲಸಿಕೆ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಕಾಮತ್, ಅನೇಕ ಸೇವಾ ಸಂಸ್ಥೆಗಳು ಕೋವಿಡ್‌ ಸಂದರ್ಭದಲ್ಲಿ ಜನರಿಗೆ ಉಪಯುಕ್ತವಾಗುವ‌ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡು ಸಾಮಾಜಿಕ ಜವಬ್ದಾರಿಯನ್ನು ನಿಭಾಯಿಸಿದೆ. ಆಹಾರ ವಿತರಣೆ, ಮಾಸ್ಕ್, ಸ್ಯಾನಿಟೈಸರ್ ವಿತರಣೆ, ಔಷಧಿಗಳ ವಿತರಣೆ ಸೇರಿದಂತೆ ಜನರಿಗೆ ಸಹಕಾರಿಯಾಗುವ ಕೆಲಸದಲ್ಲಿ ಸೇವಾ‌ ಸಂಸ್ಥೆಗಳು ತೊಡಗಿಸಿಕೊಂಡಿವೆ. ಆ ಸಾಲಿನಲ್ಲಿ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಕೆಲಸ ಶ್ಲಾಘನೀಯ ಎಂದರು.

ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಕಾರ್ಯದರ್ಶಿಗಳಾದ ರಘುವೀರ್ ಕಾಮತ್ ಮಾತನಾಡಿ, ಸಾಮಾಜಿಕ ಕಳಕಳಿಯುಳ್ಳ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಸದಸ್ಯರು ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಲಸಿಕೆ ವಿತರಿಸುವ ಮೂಲಕ ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದಿದ್ದಾರೆ. ಅವರ ಕಾರ್ಯಕ್ಕೆ ಯಶಸ್ಸು ದಕ್ಕಲಿ ಎಂದು ಹಾರೈಸಿದರು.

ಬಳಿಕ ಮಾತನಾಡಿದ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಅಧ್ಯಕ್ಷರಾದ ವರುಣ್ ರಾಜ್ ಅಂಬಟ್, ಕಳೆದ ಲಾಕ್ ಡೌನ್ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಒದಗಿಸುವ  ನಿಟ್ಟಿನಲ್ಲಿ ಹೆಲ್ಪಿಂಗ್ ಹ್ಯಾಂಡ್ಸ್ ಫೌಂಡೇಶನ್ ಸ್ಥಾಪಿಸಲಾಗಿತ್ತು. ಇಂದು ಸದಸ್ಯರ ಸಂಖ್ಯೆಯಲ್ಲಿಯೂ ಕೂಡ ಹೆಚ್ಚಳವಾಗಿದೆ. ಈ ಬಾರಿಯ ಲಾಕ್ ಡೌನ್ ಸಂದರ್ಭದಲ್ಲಿ ಜನರಿಗೆ ಊಟದ‌ ವ್ಯವಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇವೆ. ಆ ನಿಟ್ಟಿನಲ್ಲಿ ಕೋವಿಡ್ ಲಸಿಕೆ ಖರೀದಿಸಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತವಾಗಿ ಹಂಚಲು ತೀರ್ಮಾನಿಸಲಾಗಿತ್ತು. ಇಂದು 210 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಹೇಳಿದರು. 

ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಸಂದೀಪ್ ಗರೋಡಿ, ಸ್ಥಳೀಯ ಮನಪಾ ಸದಸ್ಯರಾದ ಸಂಧ್ಯಾ ಮೋಹನ್ ಆಚಾರ್, ಅಡ್ವಕೇಟ್ ರಂಜಿನಿ ಕಾಮತ್ ಹಾಗೂ ಹೆಲ್ಪಿಂಗ್ ಹ್ಯಾಂಡ್ ಫೌಂಡೇಶನ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು