6:08 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ:  ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ

26/07/2022, 12:24

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ.

ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಮುದ್ರದಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ದೊರೆಯುವಂತೆ ಮತ್ತು ಯಾವುದೇ ಅವಘಢ ಸಂಭವಿಸದಂತೆ ಸಮುದ್ರರಾಜ ಹಾಗೂ ತಮ್ಮ ಇಷ್ಟದೇವರಲ್ಲಿ ಮೊರೆ ಹೋಗಿದ್ದಾರೆ.

ಮೀನು ಮೊಟ್ಟೆ ಇಡುವ ಸಮಯದಲ್ಲಿ ಮೀನುಗಾರಿಕೆಗೆ ಕರಾವಳಿಯಲ್ಲಿ ನಿಷೇಧವಿರುತ್ತದೆ. ಕಡಲಿನಲ್ಲಿ ಮತ್ಸ್ಯ ಸಂಪತ್ತಿನ ವೃದ್ಧಿಯ ಆಶಯ ಈ ನಿಷೇಧದ ಉದ್ದೇಶವಾಗಿದೆ. ಮೀನುಗಾರಿಕೆ ಸ್ಥಗಿತ ಸಮಯದಲ್ಲಿ ಯಾಂತ್ರೀಕೃತ ದೋಣಿಯ ಮೂಲಕ ಆಳ ಸಮುದ್ರ ಮೀನುಗಾರಿಕೆ ನಡೆಸುವುದಕ್ಕೆ ನಿಷೇಧವಿರುತ್ತದೆ. ಆದರೆ ನಾಡದೋಣಿ ಮೂಲಕ ಸಮುದ್ರ ಮೀನುಗಾರಿಕೆಗೆ ಅವಕಾಶವಿರುತ್ತದೆ.

ಮೀನುಗಾರಿಕೆ ನಿಷೇಧ ಸಮಯದಲ್ಲಿ ಸಾಮಾನ್ಯವಾಗಿ ಮೀನಿನ ರೇಟ್ ಜಾಸ್ತಿಯಾಗುತ್ತದೆ. ಕೆಜಿಗೆ 200 ರೂಪಾಯಿಗೆ ಸಿಗುವ ಬಂಗುಡೆ ಮೀನು ಕೆಜಿಗೆ 400ರಿಂದ 450 ರೂಪಾಯಿ ಆಗುತ್ತದೆ. ಉಳಿದ ಮೀನಿನ ಮಾರುಕಟ್ಟೆ ಮೌಲ್ಯ ಕೂಡ ಡಬಲ್ ಆಗುತ್ತದೆ. ಆಳ ಸಮುದ್ರ ಮೀನುಗಾರಿಕೆ ನಿಷೇಧ ಸಮಯದಲ್ಲಿ ನದಿ, ಹೊಳೆ, ತೋಡು, ಕೆರೆ ಮೀನುಗಾರಿಕೆಗೆ ಬಹಳ ಬೇಡಿಕೆ ಇರುತ್ತದೆ. ಹೊಳೆ ಮೀನು ಪ್ರಿಯರ ಸಮುದಾಯವೇ ಕರಾವಳಿಯಲ್ಲಿದೆ. 

ಸಮುದ್ರದಲ್ಲಿ ಆಳ ಮೀನುಗಾರಿಕೆಯ ಯಾಂತ್ರೀಕೃತ

ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಮೀನುಗಾರಿಕೆ ನಿಷೇಧ ಇರುವುದರಿಂದ ಅವರೆಲ್ಲ

ರಜೆಯಲ್ಲಿ ಊರಿಗೆ ತೆರಳಿದ್ದಾರೆ. ಆದರೆ ಮೀನುಗಾರಿಕೆ ಶುರುವಾಗುವ ದಿನ ಹತ್ತಿರ ಬರಲಾರಂಭಿಸಿರುವುದರಿಂದ ಅವರು ಮತ್ತೆ

ಮಂಗಳೂರಿನತ್ತ ಮುಖ ಮಾಡಿದ್ದಾರೆ.

ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದೆ. ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು