11:22 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ:  ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ

26/07/2022, 12:24

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ.

ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಮುದ್ರದಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ದೊರೆಯುವಂತೆ ಮತ್ತು ಯಾವುದೇ ಅವಘಢ ಸಂಭವಿಸದಂತೆ ಸಮುದ್ರರಾಜ ಹಾಗೂ ತಮ್ಮ ಇಷ್ಟದೇವರಲ್ಲಿ ಮೊರೆ ಹೋಗಿದ್ದಾರೆ.

ಮೀನು ಮೊಟ್ಟೆ ಇಡುವ ಸಮಯದಲ್ಲಿ ಮೀನುಗಾರಿಕೆಗೆ ಕರಾವಳಿಯಲ್ಲಿ ನಿಷೇಧವಿರುತ್ತದೆ. ಕಡಲಿನಲ್ಲಿ ಮತ್ಸ್ಯ ಸಂಪತ್ತಿನ ವೃದ್ಧಿಯ ಆಶಯ ಈ ನಿಷೇಧದ ಉದ್ದೇಶವಾಗಿದೆ. ಮೀನುಗಾರಿಕೆ ಸ್ಥಗಿತ ಸಮಯದಲ್ಲಿ ಯಾಂತ್ರೀಕೃತ ದೋಣಿಯ ಮೂಲಕ ಆಳ ಸಮುದ್ರ ಮೀನುಗಾರಿಕೆ ನಡೆಸುವುದಕ್ಕೆ ನಿಷೇಧವಿರುತ್ತದೆ. ಆದರೆ ನಾಡದೋಣಿ ಮೂಲಕ ಸಮುದ್ರ ಮೀನುಗಾರಿಕೆಗೆ ಅವಕಾಶವಿರುತ್ತದೆ.

ಮೀನುಗಾರಿಕೆ ನಿಷೇಧ ಸಮಯದಲ್ಲಿ ಸಾಮಾನ್ಯವಾಗಿ ಮೀನಿನ ರೇಟ್ ಜಾಸ್ತಿಯಾಗುತ್ತದೆ. ಕೆಜಿಗೆ 200 ರೂಪಾಯಿಗೆ ಸಿಗುವ ಬಂಗುಡೆ ಮೀನು ಕೆಜಿಗೆ 400ರಿಂದ 450 ರೂಪಾಯಿ ಆಗುತ್ತದೆ. ಉಳಿದ ಮೀನಿನ ಮಾರುಕಟ್ಟೆ ಮೌಲ್ಯ ಕೂಡ ಡಬಲ್ ಆಗುತ್ತದೆ. ಆಳ ಸಮುದ್ರ ಮೀನುಗಾರಿಕೆ ನಿಷೇಧ ಸಮಯದಲ್ಲಿ ನದಿ, ಹೊಳೆ, ತೋಡು, ಕೆರೆ ಮೀನುಗಾರಿಕೆಗೆ ಬಹಳ ಬೇಡಿಕೆ ಇರುತ್ತದೆ. ಹೊಳೆ ಮೀನು ಪ್ರಿಯರ ಸಮುದಾಯವೇ ಕರಾವಳಿಯಲ್ಲಿದೆ. 

ಸಮುದ್ರದಲ್ಲಿ ಆಳ ಮೀನುಗಾರಿಕೆಯ ಯಾಂತ್ರೀಕೃತ

ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಮೀನುಗಾರಿಕೆ ನಿಷೇಧ ಇರುವುದರಿಂದ ಅವರೆಲ್ಲ

ರಜೆಯಲ್ಲಿ ಊರಿಗೆ ತೆರಳಿದ್ದಾರೆ. ಆದರೆ ಮೀನುಗಾರಿಕೆ ಶುರುವಾಗುವ ದಿನ ಹತ್ತಿರ ಬರಲಾರಂಭಿಸಿರುವುದರಿಂದ ಅವರು ಮತ್ತೆ

ಮಂಗಳೂರಿನತ್ತ ಮುಖ ಮಾಡಿದ್ದಾರೆ.

ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದೆ. ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು