1:33 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಗರಿಗೆದರಿದ ಚಟುವಟಿಕೆ:  ಆಗಸ್ಟ್ 1ರಿಂದ ಆಳ ಸಮುದ್ರ ಮೀನುಗಾರಿಕೆ ಆರಂಭ

26/07/2022, 12:24

ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಕರಾವಳಿಯಲ್ಲಿ ಸುಮಾರು 2 ತಿಂಗಳ ಕಾಲ ಸ್ಥಗಿತಗೊಂಡಿದ್ದ ಮೀನುಗಾರಿಕೆ ಆಗಸ್ಟ್ 1ರಂದು ಮತ್ತೆ ಆರಂಭಗೊಳ್ಳಲಿದ್ದು, ಮೀನುಗಾರರು ಭರದ ಸಿದ್ಧತೆ ನಡೆಸಿದ್ದಾರೆ.

ಪ್ರಸ್ತುತ ಮೀನುಗಾರಿಕೆ ಹಂಗಾಮದಲ್ಲಿ ಉತ್ತಮ ಫಸಲಿನ ನಿರೀಕ್ಷೆಯೊಂದಿಗೆ ಕಡಲಿಗಿಳಿಯಲು ಮೀನುಗಾರರು ಸಿದ್ಧತೆ ಮಾಡಿಕೊಂಡಿದ್ದಾರೆ. ಸಮುದ್ರದಲ್ಲಿ ಮತ್ಸ್ಯ ಸಂಪತ್ತು ಹೇರಳವಾಗಿ ದೊರೆಯುವಂತೆ ಮತ್ತು ಯಾವುದೇ ಅವಘಢ ಸಂಭವಿಸದಂತೆ ಸಮುದ್ರರಾಜ ಹಾಗೂ ತಮ್ಮ ಇಷ್ಟದೇವರಲ್ಲಿ ಮೊರೆ ಹೋಗಿದ್ದಾರೆ.

ಮೀನು ಮೊಟ್ಟೆ ಇಡುವ ಸಮಯದಲ್ಲಿ ಮೀನುಗಾರಿಕೆಗೆ ಕರಾವಳಿಯಲ್ಲಿ ನಿಷೇಧವಿರುತ್ತದೆ. ಕಡಲಿನಲ್ಲಿ ಮತ್ಸ್ಯ ಸಂಪತ್ತಿನ ವೃದ್ಧಿಯ ಆಶಯ ಈ ನಿಷೇಧದ ಉದ್ದೇಶವಾಗಿದೆ. ಮೀನುಗಾರಿಕೆ ಸ್ಥಗಿತ ಸಮಯದಲ್ಲಿ ಯಾಂತ್ರೀಕೃತ ದೋಣಿಯ ಮೂಲಕ ಆಳ ಸಮುದ್ರ ಮೀನುಗಾರಿಕೆ ನಡೆಸುವುದಕ್ಕೆ ನಿಷೇಧವಿರುತ್ತದೆ. ಆದರೆ ನಾಡದೋಣಿ ಮೂಲಕ ಸಮುದ್ರ ಮೀನುಗಾರಿಕೆಗೆ ಅವಕಾಶವಿರುತ್ತದೆ.

ಮೀನುಗಾರಿಕೆ ನಿಷೇಧ ಸಮಯದಲ್ಲಿ ಸಾಮಾನ್ಯವಾಗಿ ಮೀನಿನ ರೇಟ್ ಜಾಸ್ತಿಯಾಗುತ್ತದೆ. ಕೆಜಿಗೆ 200 ರೂಪಾಯಿಗೆ ಸಿಗುವ ಬಂಗುಡೆ ಮೀನು ಕೆಜಿಗೆ 400ರಿಂದ 450 ರೂಪಾಯಿ ಆಗುತ್ತದೆ. ಉಳಿದ ಮೀನಿನ ಮಾರುಕಟ್ಟೆ ಮೌಲ್ಯ ಕೂಡ ಡಬಲ್ ಆಗುತ್ತದೆ. ಆಳ ಸಮುದ್ರ ಮೀನುಗಾರಿಕೆ ನಿಷೇಧ ಸಮಯದಲ್ಲಿ ನದಿ, ಹೊಳೆ, ತೋಡು, ಕೆರೆ ಮೀನುಗಾರಿಕೆಗೆ ಬಹಳ ಬೇಡಿಕೆ ಇರುತ್ತದೆ. ಹೊಳೆ ಮೀನು ಪ್ರಿಯರ ಸಮುದಾಯವೇ ಕರಾವಳಿಯಲ್ಲಿದೆ. 

ಸಮುದ್ರದಲ್ಲಿ ಆಳ ಮೀನುಗಾರಿಕೆಯ ಯಾಂತ್ರೀಕೃತ

ದೋಣಿಗಳಲ್ಲಿ ದುಡಿಯುವವರಲ್ಲಿ ಬಹುಪಾಲು ಆಂಧ್ರ, ಒಡಿಶಾ, ತಮಿಳುನಾಡು ಸೇರಿದಂತೆ ಹೊರ ರಾಜ್ಯಗಳಿಗೆ ಸೇರಿದವರಾಗಿದ್ದಾರೆ. ಮೀನುಗಾರಿಕೆ ನಿಷೇಧ ಇರುವುದರಿಂದ ಅವರೆಲ್ಲ

ರಜೆಯಲ್ಲಿ ಊರಿಗೆ ತೆರಳಿದ್ದಾರೆ. ಆದರೆ ಮೀನುಗಾರಿಕೆ ಶುರುವಾಗುವ ದಿನ ಹತ್ತಿರ ಬರಲಾರಂಭಿಸಿರುವುದರಿಂದ ಅವರು ಮತ್ತೆ

ಮಂಗಳೂರಿನತ್ತ ಮುಖ ಮಾಡಿದ್ದಾರೆ.

ಜು. 31ಕ್ಕೆ ಐಸ್ ಪ್ಲಾಂಟ್ ಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭಿಸಲಿದೆ. ಮೀನುಗಾರಿಕೆಗೆ ಬೋಟುಗಳನ್ನು, ಎಂಜಿನ್ ಗಳನ್ನು ದುರಸ್ತಿಗೊಳಿಸಿ ಹಾಗೂ ಬಲೆಗಳನ್ನು ಸಿದ್ಧಗೊಳಿಸುವ ಕಾರ್ಯ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು