11:23 PM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಮಾಜಿ ಸಿಎಂ ಸಿದ್ದರಾಮಯ್ಯ ‘ಅಮೃತ ಮಹೋತ್ಸವ’: 4 ಲಕ್ಷ ಮಂದಿಗೆ ಆಸನ, 5 ಲಕ್ಷ ಜನರಿಗೆ ಭೋಜನ!

26/07/2022, 14:45

ಬೆಂಗಳೂರು(reporterkarnataka.com):
ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಆಗಸ್ಟ್‌ 3ರಂದು ನಡೆಯಲಿರುವ ಸಿದ್ದರಾಮಯ್ಯ–75 ಅಮೃತ ಮಹೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, 5 ಲಕ್ಷ ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.

ಅಮೃತ ಮಹೋತ್ಸವ ಯಶಸ್ವಿಯ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನಿವಾಸದಲ್ಲಿ ಹಲವು ಸಭೆಗಳನ್ನು ನಡೆಸಲಾಗಿದೆ. ಅಮೃತ ಮಹೋತ್ಸವ ಸಮಿತಿ ಇವೆಲ್ಲದರ ಜವಾಬ್ದಾರಿ ವಹಿಸಿದೆ. ವಿವಿಧ ವ್ಯವಸ್ಥೆಗಳ ಹೊಣೆಯನ್ನು ಬೇರೆ, ಬೇರೆ ನಾಯಕರಿಗೆ ವಹಿಸಲಾಗಿದೆ.

ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗುತ್ತಿದ್ದು, 4 ಲಕ್ಷ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲು ಅಮೃತ ಮಹೋತ್ಸವ ಸಮಿತಿ ನಿರ್ಧರಿಸಿದೆ. ರಾಹುಲ್ ಗಾಂಧಿ ಮತ್ತಿತರ ಗಣ್ಯರು ಕಾರ್ಯಕ್ರಮಕ್ಕೆ ಬರಲು ಎರಡು ಹೆಲಿಪ್ಯಾಡ್‌ಗಳು ಸಿದ್ಧವಾಗುತ್ತಿದೆ. 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಮತ್ತು ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ, ಮಳೆ ಬಂದರೆ ಯಾವುದೇ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಮಾಡಲಾಗುತ್ತಿದೆ. 

ಅಮೃತ ಮಹೋತ್ಸವದಂದು ಬೆಳಿಗ್ಗೆ 10 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ಮೊದಲು ಸಂಗೀತ ನಿರ್ದೇಶಕ ಹಂಸಲೇಖಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ.

ಇದು 2 ತಾಸು ನಡೆಯಲಿದೆ. ಕಾರ್ಯಕ್ರಮದ ಸ್ಥಳದಲ್ಲಿ ಸಿದ್ದರಾಮಯ್ಯ ಅವರ ಕುರಿತಾದ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ಹಿಂದಿನ ದಿನ (ಆ. 2ರ ರಾತ್ರಿ)  ಲೇಸರ್ ಶೋ, ಸಾಂಸ್ಕೃತಿಕ ಕಾರ್ಯಕ್ರಮಗಳೂ ನಡೆಯಲಿದೆ ಎಂದು ಸಮಿತಿಯ ಮೂಲಗಳು ತಿಳಿಸಿವೆ.

ಇತ್ತೀಚಿನ ಸುದ್ದಿ

ಜಾಹೀರಾತು