4:07 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ದಿಲ್ಲಿ: ರಾಹುಲ್‌ ಗಾಂಧಿ ಸೇರಿದಂತೆ 18 ಮಂದಿ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

26/07/2022, 20:06

ಹೊಸದಿಲ್ಲಿ(reporterkarnataka.com):ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಇಡಿ ಅಧಿಕಾರಿಗಳು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್‌ 

ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ರಾಹುಲ್ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರನ್ನು ಹಲವು ಬಾರಿ ವಿಚಾರಣೆ ನಡೆಸಿರುವ ಇಡಿ ಎರಡು ದಿನಗಳಿಂದ ಸೋನಿಯಾ ಗಾಂಧಿ ಅವರನ್ನೂ ವಿಚಾರಣೆ ನಡೆಸುತ್ತಿದೆ. ಇದನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಹಾಗೂ ಪ್ರಮುಖ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಡಿ ಪ್ರಕರಣದ ಜತೆಗೆ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ಸಂಸತ್‌ ಆವರಣದಿಂದ ವಿಜಯ್‌ ಚೌಕ್‌ವರೆಗೆ ನಡೆಸುತ್ತಿದ್ದ ಪಾದಯಾತ್ರೆಯನ್ನು ಪೊಲೀಸರು ತಡೆದಿದ್ದಾರೆ.

ಹಾಗಾಗಿ ಪೊಲೀಸರು ಹಾಗೂ ಕಾಂಗ್ರೆಸ್‌ ನಾಯಕರ ನಡುವೆ ಮಾತಿನ ಚಕಮಕಿ ನಡೆದು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಬಂಧಿತರಲ್ಲಿ ದೀಪೇಂದರ್ ಹೂಡಾ ಮತ್ತು ಮಲ್ಲಿಕಾರ್ಜುನ ಖರ್ಗೆ ಕೂಡ ಇದ್ದಾರೆ. ಪೊಲೀಸರ ಸೂಚನೆ ಮೇರೆಗೆ ಪ್ರತಿಭಟನೆ ನಡೆಸುತ್ತಿದ್ದು, ಬಂಧಿಸಿರುವುದು ಕಾನೂನು ಬಾಹಿರ ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು.

ಇತ್ತೀಚಿನ ಸುದ್ದಿ

ಜಾಹೀರಾತು