2:09 PM Tuesday2 - December 2025
ಬ್ರೇಕಿಂಗ್ ನ್ಯೂಸ್
ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ…

ಇತ್ತೀಚಿನ ಸುದ್ದಿ

ಬೊಮ್ಮಾಯಿ ಸರಕಾರಕ್ಕೆ ವರ್ಷದ ಸಂಭ್ರಮ; ಪ್ರತಿ ಜಿಲ್ಲೆಯಲ್ಲಿ ಜನೋತ್ಸವ: ಸಚಿವ ಸುನಿಲ್ ಕುಮಾರ್  

26/07/2022, 20:35

ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರಕಾರವು ಒಂದು ವರ್ಷವನ್ನು ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ರಾಜ್ಯಾದ್ಯಂತ ಇದೇ 28ರಿಂದ ಎಲ್ಲ ಜಿಲ್ಲೆಗಳಲ್ಲಿ ಜನೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂಬಂಧ ಮೊದಲ ಕಾರ್ಯಕ್ರಮ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ ಎಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ಬಿಜೆಪಿ ಆಡಳಿತದ ಮೂರು ವರ್ಷ ಮತ್ತು ಬೊಮ್ಮಾಯಿ ನೇತೃತ್ವದ ಸರಕಾರದ ಒಂದು ವರ್ಷವನ್ನು ಜನೋತ್ಸವವಾಗಿ ರಾಜ್ಯದಾದ್ಯಂತ ನಡೆಸಲಾಗುತ್ತಿದೆ ಎಂದು ಹೇಳಿದರು.

ಇಂಧನ ಇಲಾಖೆಯಲ್ಲಿ ಒಂದು ವರ್ಷದ ಅವಧಿಯಲ್ಲಿ ಹೊಸ ಹೊಸ ಯೋಜನೆಗಳನ್ನು ಜನರಿಗೆ ತಲುಪಿಸಲಾಗಿದೆ. ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಇಲ್ಲದ ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ಕೊಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಟ್ರಾನ್ಸ್‌ ಫಾರ್ಮರ್ ನಿರ್ವಹಣಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಒಂದು ವಾರದಲ್ಲಿ ಸುಮಾರು 3.5 ಲಕ್ಷದಿಂದ 4 ಲಕ್ಷ ಟ್ರಾನ್ಸ್ ಫಾರ್ಮರ್ ನಿರ್ವಹಣೆ ಮಾಡಲಾಗಿದೆ ಎಂದು ವಿವರಿಸಿದರು.

ಸುಟ್ಟು ಹೋದ ಟಿ.ಸಿ.ಗಳನ್ನು 24 ಗಂಟೆಯೊಳಗೆ ಬದಲಿಸಬೇಕೆಂಬ ದೊಡ್ಡ ಪ್ರಯತ್ನ ಕರ್ನಾಟಕದ ಇತಿಹಾಸದಲ್ಲಿ ಮೊದಲ ಬಾರಿಗೆ ಆರಂಭಿಸಿದ್ದು, ಒಂದು ವರ್ಷದಲ್ಲಿ ಪ್ರಗತಿಯನ್ನು ನಮ್ಮ ಇಲಾಖೆ ಮೂಲಕ ಕಾಣುತ್ತಿದ್ದೇವೆ. ಬೆಂಗಳೂರಿನಲ್ಲಿ ಒಕ್ಕುಪೆನ್ಸಿ ಸರ್ಟಿಫಿಕೇಟ್ ಇಲ್ಲದೆ ವಿದ್ಯುತ್ ಸಂಪರ್ಕ ಇಲ್ಲ ಎಂಬ ತಪ್ಪು ನಿರ್ಧಾರವನ್ನು ಹಿಂದಿನ ಕಾಂಗ್ರೆಸ್ ಮಾಡಿತ್ತು. ಅದನ್ನು ಸರಿಪಡಿಸಿ 5 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ವಿದ್ಯುತ್ ಸಂಪರ್ಕ ಕೊಡುವ ಪ್ರಯತ್ನ ಮಾಡಲಾಗಿದೆ ಎಂದರು.

ಕೆಪಿಟಿಸಿಎಲ್ ಮೂಲಕ 1,850 ಕಿಮೀ ಹೊಸ ವಿದ್ಯುತ್ ಲೈನನ್ನು ಒಂದು ವರ್ಷದಲ್ಲಿ ಎಳೆಯಲಾಗಿದೆ. ಇದೊಂದು ದೊಡ್ಡ ಸಾಧನೆ. 37 ಕಡೆಗಳಲ್ಲಿ ಸಬ್ ಸ್ಟೇಷನ್ ನಿರ್ಮಾಣ, 200 ಕಡೆಗಳಲ್ಲಿ ಸಬ್ ಸ್ಟೇಷನ್ ಉನ್ನತೀಕರಣ ಮಾಡಲಾಗಿದೆ. ಇದು ಸೇರಿದಂತೆ ವಿವಿಧ ಇಲಾಖೆಗಳ ಸಾಧನೆಯನ್ನು ಜನೋತ್ಸವದ ಮೂಲಕ ತಿಳಿಸಲಾಗುವುದು ಎಂದು ತಿಳಿಸಿದರು.

ನಾವು ಜನರನ್ನು ಕಣ್ಮುಂದೆ ಇಟ್ಟುಕೊಂಡು ಜನೋತ್ಸವ ಮಾಡಿದರೆ, ಕಾಂಗ್ರೆಸ್‍ನವರು ವ್ಯಕ್ತಿಯನ್ನು ಕಣ್ಮುಂದೆ ಇಟ್ಟುಕೊಂಡು ವ್ಯಕ್ತಿಯ ಉತ್ಸವ ಮಾಡುತ್ತಿದ್ದಾರೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ವ್ಯತ್ಯಾಸ ಎಂದು ವಿವರಿಸಿದರು. ನಾವು ಯಾವತ್ತೂ ವ್ಯಕ್ತಿಯನ್ನು ಆರಾಧಿಸಲಿಲ್ಲ. ನಾವು ವಿಚಾರ, ಜನರನ್ನು ಆರಾಧಿಸಿದ್ದೇವೆ. ವ್ಯಕ್ತಿ ಆರಾಧಿಸುವ ಅವರು ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ತನ್ನ ಆಡಳಿತದ ಅವಧಿಯಲ್ಲಿ ಜಾತಿಗಳ ನಡುವೆ ವಿಷಬೀಜ ಬಿತ್ತಿದ್ದರು. ಅದನ್ನು ಜಮೀರ್ ಮುಂದುವರಿಸಿದ್ದಾರೆ ಎಂದ ಅವರು, ಯಾವುದೇ ಜಾತಿಗೆ ಸೀಮಿತವಾಗಿ ಸರಕಾರವೊಂದು ಕೆಲಸ ಮಾಡಲು ಸಾಧ್ಯವಿಲ್ಲ. ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವುದು ಇವತ್ತಿನ ಅನಿವಾರ್ಯತೆ. ಆ ಕಾರ್ಯವನ್ನು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನೆಲೆಯಲ್ಲಿ ಬಿಜೆಪಿ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷವು ಜಾತಿಗಳನ್ನು ಒಡೆಯುತ್ತಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು