3:45 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ , ಸಚಿವರಿಗೆ ಮನವಿ: ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಲು ಆಗ್ರಹ

22/06/2021, 09:07

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ , ಚಿಕ್ಕಬಳ್ಳಾಪುರ , ಬೆಂಗಳೂರು ಗ್ರಾಮಾಂತರ , ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ , ರಾಜ್ಯದಲ್ಲಿ ಉತ್ಪತ್ತಿಯಾಗುವ ಶೇ .೭೦ ರಷ್ಟು ಮಾವು ಈ ಪ್ರದೇಶಗಳಲ್ಲೇ ಬೆಳೆಯುತ್ತಾರೆ ಎಂದು ಗಮನಕ್ಕೆ ತಂದಿದ್ದಾರೆ .

ದೇಶ ವಿದೇಶಗಳಿಗೂ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ , ವ್ಯಾಪಾರಿಗಳು , ದಲ್ಲಾಳಿಗಳ ಹಾವಳಿಯಿಂದಾಗಿ ಪ್ರತಿ ಟನ್ ಮಾವಿಗೆ ೩ ಸಾವಿರದಿಂದ ೫ ಸಾವಿರದವರಗೂ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ . ಒಂದು ಎಕರೆ ಮಾವು ಬೆಳೆಯಲು ರೈತನಿಗೆ ೧೫ ರಿಂದ ೨೦ ಸಾವಿರ ರೂ ಖರ್ಚಾಗುತ್ತದೆ . ಇದರಿಂದ ರೈತರು ಬಹಳ ನಷ್ಟಕ್ಕೆ ಒಳಗಾಗಿದ್ದಾರೆ . ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ರೈತ ತಲುಪಿದ್ದಾನೆ ಎಂದು ಗಮನಕ್ಕೆ ತಂದಿದ್ದಾರೆ .

ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ರಕ್ಷಣೆಗೆ ಬರಬೇಕು , ತಕ್ಷಣವೇ ಮಧ್ಯೆ ಪ್ರವೇಶಿಸಿ ಪ್ರತಿ ಟನ್ ಮಾವಿಗೆ ೧೦ ಸಾವಿರ ರೂಗಳ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ೨೫ ಸಾವಿರ ರೂಗಳ ವಿಶೇಷ ಪರಿಹಾರವನ್ನು ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು