6:04 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ , ಸಚಿವರಿಗೆ ಮನವಿ: ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಲು ಆಗ್ರಹ

22/06/2021, 09:07

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ , ಚಿಕ್ಕಬಳ್ಳಾಪುರ , ಬೆಂಗಳೂರು ಗ್ರಾಮಾಂತರ , ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ , ರಾಜ್ಯದಲ್ಲಿ ಉತ್ಪತ್ತಿಯಾಗುವ ಶೇ .೭೦ ರಷ್ಟು ಮಾವು ಈ ಪ್ರದೇಶಗಳಲ್ಲೇ ಬೆಳೆಯುತ್ತಾರೆ ಎಂದು ಗಮನಕ್ಕೆ ತಂದಿದ್ದಾರೆ .

ದೇಶ ವಿದೇಶಗಳಿಗೂ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ , ವ್ಯಾಪಾರಿಗಳು , ದಲ್ಲಾಳಿಗಳ ಹಾವಳಿಯಿಂದಾಗಿ ಪ್ರತಿ ಟನ್ ಮಾವಿಗೆ ೩ ಸಾವಿರದಿಂದ ೫ ಸಾವಿರದವರಗೂ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ . ಒಂದು ಎಕರೆ ಮಾವು ಬೆಳೆಯಲು ರೈತನಿಗೆ ೧೫ ರಿಂದ ೨೦ ಸಾವಿರ ರೂ ಖರ್ಚಾಗುತ್ತದೆ . ಇದರಿಂದ ರೈತರು ಬಹಳ ನಷ್ಟಕ್ಕೆ ಒಳಗಾಗಿದ್ದಾರೆ . ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ರೈತ ತಲುಪಿದ್ದಾನೆ ಎಂದು ಗಮನಕ್ಕೆ ತಂದಿದ್ದಾರೆ .

ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ರಕ್ಷಣೆಗೆ ಬರಬೇಕು , ತಕ್ಷಣವೇ ಮಧ್ಯೆ ಪ್ರವೇಶಿಸಿ ಪ್ರತಿ ಟನ್ ಮಾವಿಗೆ ೧೦ ಸಾವಿರ ರೂಗಳ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ೨೫ ಸಾವಿರ ರೂಗಳ ವಿಶೇಷ ಪರಿಹಾರವನ್ನು ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು