11:31 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಮಾವು ಬೆಳೆಗಾರರ ನೆರವಿಗೆ ಬರಲು ಸಿಎಂ , ಸಚಿವರಿಗೆ ಮನವಿ: ಟನ್ ಮಾವಿಗೆ 10 ಸಾವಿರ ಬೆಂಬಲ ಬೆಲೆ ನೀಡಲು ಆಗ್ರಹ

22/06/2021, 09:07

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಬೆಲೆ ಕುಸಿತದಿಂದ ಸಂಕಷ್ಟಕ್ಕೊಳಗಾಗಿರುವ ಮಾವು ಬೆಳೆಗಾರರ ನೆರವಿಗೆ ಕೂಡಲೇ ರಾಜ್ಯ ಸರ್ಕಾರ ಧಾವಿಸಬೇಕು ಮತ್ತು ಪ್ರತಿ ಟನ್ ಮಾವಿಗೆ ೧೦ ಸಾವಿರ ರೂ ಬೆಂಬಲ ಬೆಲೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ.ವೈ.ಎ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳು ಹಾಗೂ ತೋಟಗಾರಿಕಾ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ತೋಟಗಾರಿಕಾ , ರೇಷ್ಮೆ ಸಚಿವ ಆರ್. ಶಂಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು , ಕೋಲಾರ , ಚಿಕ್ಕಬಳ್ಳಾಪುರ , ಬೆಂಗಳೂರು ಗ್ರಾಮಾಂತರ , ರಾಮನಗರ ಜಿಲ್ಲೆಗಳಲ್ಲಿ ಅತಿ ಹೆಚ್ಚು ರೈತರು ಮಾವು ಬೆಳೆಯುತ್ತಾರೆ , ರಾಜ್ಯದಲ್ಲಿ ಉತ್ಪತ್ತಿಯಾಗುವ ಶೇ .೭೦ ರಷ್ಟು ಮಾವು ಈ ಪ್ರದೇಶಗಳಲ್ಲೇ ಬೆಳೆಯುತ್ತಾರೆ ಎಂದು ಗಮನಕ್ಕೆ ತಂದಿದ್ದಾರೆ .

ದೇಶ ವಿದೇಶಗಳಿಗೂ ರಫ್ತಾಗುತ್ತಿದ್ದ ಮಾವಿಗೆ ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಸಿಗುತ್ತಿಲ್ಲ , ವ್ಯಾಪಾರಿಗಳು , ದಲ್ಲಾಳಿಗಳ ಹಾವಳಿಯಿಂದಾಗಿ ಪ್ರತಿ ಟನ್ ಮಾವಿಗೆ ೩ ಸಾವಿರದಿಂದ ೫ ಸಾವಿರದವರಗೂ ಬೆಲೆ ನಿಗದಿ ಮಾಡಿ ರೈತರಿಗೆ ಮೋಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ . ಒಂದು ಎಕರೆ ಮಾವು ಬೆಳೆಯಲು ರೈತನಿಗೆ ೧೫ ರಿಂದ ೨೦ ಸಾವಿರ ರೂ ಖರ್ಚಾಗುತ್ತದೆ . ಇದರಿಂದ ರೈತರು ಬಹಳ ನಷ್ಟಕ್ಕೆ ಒಳಗಾಗಿದ್ದಾರೆ . ತಾನು ಬೆಳೆದ ಬೆಳೆಗೆ ಬೆಲೆ ಸಿಗದೇ ಆತ್ಮಹತ್ಯೆಗೆ ಶರಣಾಗುವ ಸ್ಥಿತಿಗೆ ರೈತ ತಲುಪಿದ್ದಾನೆ ಎಂದು ಗಮನಕ್ಕೆ ತಂದಿದ್ದಾರೆ .

ಇಂತಹ ಕಷ್ಟದ ಪರಿಸ್ಥಿತಿಯಲ್ಲಿ ಸರ್ಕಾರ ರೈತರ ರಕ್ಷಣೆಗೆ ಬರಬೇಕು , ತಕ್ಷಣವೇ ಮಧ್ಯೆ ಪ್ರವೇಶಿಸಿ ಪ್ರತಿ ಟನ್ ಮಾವಿಗೆ ೧೦ ಸಾವಿರ ರೂಗಳ ಬೆಂಬಲ ಬೆಲೆ ಅಥವಾ ಒಂದು ಎಕರೆ ಮಾವಿನ ಬೆಳೆಗೆ ೨೫ ಸಾವಿರ ರೂಗಳ ವಿಶೇಷ ಪರಿಹಾರವನ್ನು ಘೋಷಿಸುವ ಮೂಲಕ ಮಾವು ಬೆಳೆಗಾರರ ಹಿತ ಕಾಯಬೇಕು ಎಂದು ಮನವಿ ಮಾಡಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು