4:01 PM Thursday28 - May 2026
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ನ ‘ರಾಷ್ಟ್ರಪತ್ನಿ’ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ: ಸೋನಿಯಾ ಕ್ಷಮೆಯಾಚನೆಗೆ ಪಟ್ಟು

28/07/2022, 17:52

ಹೊಸದಿಲ್ಲಿ(reporterkarnataka.com): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಅಂತ ಕರೆದು ಕಾಂಗ್ರೆಸ್ ಅವಮಾನಿಸಿದ್ದು, ಕೂಡಲೇ ಕ್ಷಮೆಯಾಚಿಸಬೇಕೆಂದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ನಿಂದಿಸಿ ಅಗೌರವ ತೋರಿದ್ದಾರೆಂದು ಸಂಸತ್ತಿನಲ್ಲಿ ಬಿಜೆಪಿ ಮಹಿಳಾ ಸಂಸದರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಈ ಹೇಳಿಕೆಗಳಿಗೆ ಕಾಂಗ್ರೆಸ್ ತಕ್ಷಣ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಾಯಕರು ಲೋಕಸಭೆಯ ಕಲಾಪವನ್ನು ಸ್ಥಗಿತಗೊಳಿಸಿದರು.

ಬುಡಕಟ್ಟು ಮಹಿಳೆಯೊಬ್ಬರು ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿರುವುದನ್ನು ಕಾಂಗ್ರೆಸ್‌ಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.  ಅದಕ್ಕಾಗಿಯೇ ರಾಷ್ಟ್ರಪತಿಗಳ ಬಗ್ಗೆ ಅನುಚಿತ ಹೇಳಿಕೆ ನೀಡಿದ್ದಾರೆಂದು ಕಿಡಿ ಕಾರಿದ್ದಾರಿದ್ದಲ್ಲದೆ, ಈ ಅಸಂಬದ್ಧ ಹೇಳಿಕೆ ದೇಶದ ಸಮಸ್ತ ಜನತೆಗೆ ಮಾಡಿದ ಅವಮಾನ ಎಂದರು.

ಅಧೀರ್ ರಂಜನ್ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸೋನಿಯಾ ಗಾಂಧಿ ಅವರ ಪ್ರತಿಕೃತಿ ದಹಿಸಲು ಕರೆ ನೀಡಿದ್ದು, ಅಧೀರ್ ರಂಜನ್ ಹೇಳಿಕೆಗೆ ಸೋನಿಯಾ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ದೇಶದ ಅತ್ಯುನ್ನತ ಬುಡಕಟ್ಟು ಜನಾಂಗದವರ ಅಸ್ಮಿತೆಗೆ ಸಾಕ್ಷಿಯಾಗಿ ನಿಂತಿರುವ ದ್ರೌಪದಿ ಮುರ್ಮು ಅವರನ್ನು ಅವಮಾನಿಸುವುದು. ಇದು ಕಾಂಗ್ರೆಸ್ ನಾಯಕರ ಸಂಸ್ಕೃತಿಯ ಪ್ರತಿಬಿಂಬ ಮಾತ್ರವಲ್ಲದೆ ದ್ವೇಷದ ಪ್ರದರ್ಶನವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಹೇಳಿಕೆಗೆ ಕಾಂಗ್ರೆಸ್ ಕೂಡಲೇ ಕ್ಷಮೆಯಾಚಿಸಬೇಕು. ರಾಷ್ಟ್ರಪತಿ ವಿರುದ್ಧ ಅನುಚಿತ ಹೇಳಿಕೆ ನೀಡಿದ ಅಧೀರ್ ರಂಜನ್ ಅವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು