10:29 PM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಕೋಮುವಾದ ಪ್ರಕರಣ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪಿಸಿ ಶೀಘ್ರ ನ್ಯಾಯ ಕೊಡಿಸಿ: ನ್ಯಾಯವಾದಿ ಪದ್ಮರಾಜ್ 

28/07/2022, 20:26

ಮಂಗಳೂರು(reporterkarnataka.com): ರಾಜ್ಯ ಸರಕಾರಕ್ಕೆ ಇಚ್ಛಾಶಕ್ತಿಯಿದ್ದರೆ ಪ್ರವೀಣ್ ಕೊಲೆ ಪ್ರಕರಣ ಸೇರಿ ಸಮಾಜದಲ್ಲಿ ಶಾಂತಿ ಕದಡುವ ಕೋಮುವಾದದಂತಹ ಎಲ್ಲ ಪ್ರಕರಣಗಳನ್ನು ತ್ವರಿತ ನ್ಯಾಯಾಲಯ ಸ್ಥಾಪಿಸಿ 6 ತಿಂಗಳೊಳಗೆ ಇತ್ಯರ್ಥಗೊಳಿಸಿ ನೈಜ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕ್ರಮ‌ ಕೈಗೊಳ್ಳಲಿ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ, ಬಿಲ್ಲವ ಮುಖಂಡ, ವಕೀಲ ಪದ್ಮರಾಜ್  ಆರ್. ಆಗ್ರಹಿಸಿದ್ದಾರೆ.

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಸರ್ಕಾರದ ಭದ್ರತಾ ವೈಫಲ್ಯತೆ ಎದ್ದು ಕಾಣುತ್ತಿದೆ. ಕೆಲವು ದಿನಗಳ ಹಿಂದೆ, ಮಾಧ್ಯಮಗಳು ಪ್ರತೀಕಾರದ ಕೊಲೆ ನಡೆಯಬಹುದು ಎಂದು ಸಂಶಯ ವ್ಯಕ್ತಪಡಿಸಿ, ಸರ್ಕಾರವನ್ನು ಎಚ್ಚರಿಸಿದರೂ ಏನೂ ಕ್ರಮ ಕೈಗೊಳ್ಳದ ಗುಪ್ತಚರ ಇಲಾಖೆಯ ವಿಫಲತೆಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದ್ದಾರೆ.

ಯಾರದ್ದೋ ಸ್ವಾರ್ಥಕ್ಕಾಗಿ ಬಲಿಯಾಗುವವರು ಯಾವ ರಾಜಕಾರಣಿಯ ಮಗನೂ ಅಲ್ಲ. ಬಡಕುಟುಂಬದ ಯುವಕ. ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇದೀಗ ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಯಾರು ಜವಾಬ್ದಾರಿ? ಹೃದ್ರೋಗಪೀಡಿತ ಅಪ್ಪ, ವಯಸ್ಸಾದ ತಾಯಿ, ಮೂರು ವರ್ಷಗಳ ಹಿಂದೆ ಮದುವೆಯಾದ ಹೆಂಡತಿಗೆ ಆಧಾರಸ್ತಂಭವಾಗಿದ್ದ ಅವರ ನಿಧನದಿಂದ ಆ ಕುಟುಂಬ ಮತ್ತಷ್ಟು ಕಷ್ಟದ ಕೂಪಕ್ಕೆ ಹೋಗಿದೆ. ತಮ್ಮ ಸ್ವಾರ್ಥಕ್ಕಾಗಿ ದುಡಿಸಿಕೊಳ್ಳುವ ರಾಜಕಾರಣಿಗಳು ಪರಿಹಾರ ಘೋಷಣೆ ಮಾಡಬಹುದು. ಆದರೆ ಹೋದ ಪ್ರಾಣವನ್ನು ಮರಳಿ ಪಡೆಯಲು ಸಾಧ್ಯವೇ? ಒಂದು ಕೊಲೆಯಾದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎನ್ನುವ ರಾಗವೊಂದು ಬಿಟ್ಟರೆ, ಇಲ್ಲಿಯವರೆಗೆ ಏನು ಕ್ರಮ ಕೈಗೊಂಡಿದ್ದಾರೆ? ರಾಜಕೀಯ ಪಕ್ಷಗಳ ಇಚ್ಛಾಶಕ್ತಿಯ ಕೊರತೆಯಿಂದ ಇಂತಹ ಘಟನೆಗಳು ಮರುಕಳಿಸುತ್ತಿದ್ದು, ಶ್ರಮಜೀವಿಗಳ ಕುಟುಂಬದ ಮಕ್ಕಳೇ ಬಲಿಯಾಗುತ್ತಿದ್ದಾರೆ. ಒಂದು ವೇಳೆ ಕಠಿಣ ನಿರ್ಧಾರ ತೆಗೆದುಕೊಳ್ಳುತ್ತಿದ್ದರೆ ಪ್ರವೀಣನಂತಹ ಸಹೃದಯಿಯನ್ನು ಕಳೆದುಕೊಳ್ಳುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.

ಪ್ರವೀಣ್ ಕುಟುಂಬದ ದು‌ಃಖದ ಸಮಯದಲ್ಲಿ ಬಿಲ್ಲವ ಸಮಾಜ  ಸದಾ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು