10:52 PM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಉಡುಪಿ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು: ಪುರೋಹಿತನ ಮೇಲೆ ಶಂಕೆ; ದೂರು ದಾಖಲು

30/07/2022, 10:55

ಉಡುಪಿ(reporterkarnataka.com):
ಉಡುಪಿ ಶ್ರೀಕೃಷ್ಣ ಮಠದ ಬಳಿಯ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ.

ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್  ಅವರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಈ ಚಿನ್ನದ ಗಿಂಡಿಯನ್ನು ಪುರೋಹಿತ ಲಕ್ಷ್ಮಿ ಪ್ರಸಾದ್ ಅವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುವುದಾಗಿ ಪುತ್ತಿಗೆ ಮಠದಲ್ಲಿ ವ್ಯವಸ್ಥಾಪಕರಾಗಿರುವ ವಿಷ್ಣುಮೂರ್ತಿ  ಅವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು