7:49 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಕಾರ್ಯಕರ್ತರ ಟ್ರೋಲ್, ಆಕ್ರೋಶಕ್ಕೆ ಮಣಿದು ಕೊನೆಗೂ ಪ್ರವೀಣ್ ಮನೆಗೆ ಭೇಟಿ ನೀಡಿದ ಡಿವಿಎಸ್! : ಕುಟುಂಬಕ್ಕೆ ಸಾಂತ್ವನ

30/07/2022, 18:48

ಸುಳ್ಯ(reporterkarnataka.com): ಹಿಂದೂ ಸಂಘಟನೆಗಳ ಕಾರ್ಯಕರ್ತರ ಒತ್ತಡ, ಆಕ್ರೋಶ, ಟ್ರೋಲಿಗೆ ಮಣಿದು ಮಾಜಿ ಮುಖ್ಯಮಂತ್ರಿ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಅವರು ಕೊನೆಗೂ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಶನಿವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದರು. 

ನಮ್ಮ ಸರಕಾರ ಅಧಿಕಾರಕ್ಕೆ ಬಂದ್ರೆ ನಮಗೆಲ್ಲ ರಕ್ಷಣೆ ಸಿಗುತ್ತದೆ ಎಂಬ ಭಾವನೆ ಕಾರ್ಯಕರ್ತರಲ್ಲಿ ಇತ್ತು. ಆದರೆ ಅದರಲ್ಲಿ ಸ್ವಲ್ಪ ಕೊರತೆಯಾಗಿದೆ ಎಂಬ ಭಾವನೆಯಿದೆ. ಇತ್ತೀಚೆಗೆ ನಡೆದ ಘಟನೆಗಳನ್ನು ಗಮನಿಸಿ ನಮ್ಮದೇ ಸರಕಾರ ಸ್ವಲ್ಪ ದಿಟ್ಟ ಹೆಜ್ಜೆಯನ್ನಿಡಬೇಕಿತ್ತು. ಅದಕ್ಕೆ ಬೇಕಾದ ವ್ಯವಸ್ಥೆ ಮಾಡುವಲ್ಲಿ ನಾವು ಹಿಂದೆ ಬಿದ್ದಿದನ್ನು ಒಪ್ಪಿಕೊಳ್ಳುತ್ತೇವೆ. ಇಂತಹ ಕೃತ್ಯ ತಡೆಗೆ ವಿಶೇಷ ಕಟ್ಟೆಚ್ಚರ ವಹಿಸಬೇಕಿದೆ. ಇತ್ತೀಚಿನ ದಿನದಲ್ಲಿ ಪೊಲೀಸರೆಂದರೆ ಭಯವೇ ಇಲ್ಲದಂತಾಗಿರುವುದು ಬೇಸರ ತರಿಸಿದೆ. ಪ್ರವೀಣ್‌ಗೆ ಬೆದರಿಕೆ ಬರುತ್ತಿತ್ತು. ಪೊಲೀಸರಿಗೆ ಹೇಳಿದ್ದರು, ಆದರೂ ಪೊಲೀಸರು ಕಾರ್ಯಚರಣೆ ನಡೆಸಿಲ್ಲ ಎಂಬ ವಿಚಾರ ತಿಳಿದು ಬಂದಿದೆ. ಇದು ಗಂಭೀರ ವಿಷಯವಾಗಿದೆ ಎಂದರು.

ಪ್ರವೀಣ್ ಹತ್ಯೆ ತನಿಖೆ ಎನ್‌ಐಎಗೆ ವಹಿಸುವ ಬಗ್ಗೆ ಮುಖ್ಯಮಂತ್ರಿಗಳು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಗೃಹ ಇಲಾಖೆ ಪರಿಶೀಲನೆ ನಡೆಸಿ ತನಿಖೆ ಕೈಗೆತ್ತಿಕೊಳ್ಳಲಿದ್ದಾರೆ. ನಾವು ಮಂಗಳವಾರ ಕರ್ನಾಟಕದ ಸಂಸದರು ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಚರ್ಚಿಸಲಿದ್ದೇವೆ ಎಂದು ಸದಾನಂದ ಗೌಡರು ಹೇಳಿದರು.

ಕರ್ನಾಟಕಕ್ಕೆ ಬರುವ ಎನ್‌ಐಎ(ರಾಷ್ಟ್ರೀಯ ತನಿಖಾ ಸಳ) ಶಾಖೆಯನ್ನು ಮಂಗಳೂರಿನಲ್ಲಿ ಮಾಡಬೇಕೆಂಬ ಬೇಡಿಕೆ ಇದೆ. ಈಗಾಗಲೇ ಅದಕ್ಕೆ ಸಂಬಂಧಿಸಿದಂತೆ ಸ್ಥಳ ವೀಕ್ಷಣೆ ಕೂಡ ನಡೆಯುತ್ತಿದೆ. ಶೀಘ್ರ ಎನ್‌ಐಎ ಕೇಂದ್ರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು