2:24 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಸಿರಿಯಾದಲ್ಲಿ ತರಬೇತಿ ಪಡೆದು ಪ್ರವೀಣ್ ಹತ್ಯೆ ಮಾಡಲಾಗಿದೆ: ಕೇಂದ್ರ ಸಚಿವೆ ಕರಂದ್ಲಾಜೆ

31/07/2022, 16:24

ಸುಳ್ಯ:(Reporterkarnataka.com) ಪ್ರವೀಣ್ ನೆಟ್ಟಾರು ಚಲನವಲನ ಗೊತ್ತಿದ್ದ ಸ್ಥಳೀಯರು ಟಾರ್ಗೆಟ್ ಮಾಡಿ ಹತ್ಯೆ ಮಾಡಿದ್ದಾರೆ. ಕೇರಳ ಮಾದರಿಯಲ್ಲಿ ಕುತ್ತಿಗೆ ಕಡಿದು ಕೊಲ್ಲಲಾಗಿದೆ. ಇದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕೊಲೆ ಮಾಡುವ ರೀತಿಯಾಗಿದ್ದು, ಅವರು ಸಿರಿಯಾಗೆ ಹೋಗಿ ತರಬೇತಿ ಪಡೆದು ಹತ್ಯೆ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಸಾವು ನಮಗೆ ದುಃಖ ತಂದಿದೆ. ಸಮಾಜದಲ್ಲಿ ಅಮಾಯಕರು ಬಲಿಯಾಗುತ್ತಿದ್ದಾರೆ. ಪಿಎಫ್‌ಐ ಬ್ಯಾನ್ ಮಾಡಲು ಅಗತ್ಯ ಮಾಹಿತಿಬೇಕಾಗಿದ್ದು ಸದ್ಯ ಕೇಂದ್ರ ಸರ್ಕಾರ ಮಾಹಿತಿ ಸಂಗ್ರಹಿಸುತ್ತಿದೆ. ಇಂತಹ ಘಟನೆಗಳಾದಾಗ ಆಕ್ರೋಶ ಉಂಟಾಗುವುದು ಸಹಜ. ಅದು ನಮಗೂ ಇದೆ. ಆದರೆ ಆಕ್ರೋಶದ ಹಿಂದೆ ನಮ್ಮ ಹುಡುಗನನ್ನು ಕಳೆದುಕೊಂಡ ನೋವಿದೆ. ಆದ್ದರಿಂದ ‌ಕಾನೂನು ಮೂಲಕ ಇದರ ವಿರುದ್ಧ ಹೋರಾಟವಾಗಬೇಕಿದೆ ಎಂದರು.

ಮಸೂದ್ ಹತ್ಯೆ ಕುರಿತು ಪ್ರತಿಕ್ರಿಯೆ ನೀಡಿದ ಸಚಿವೆ ಶೋಭಾ ಕರಂದ್ಲಾಜೆ, ಮಸೂದ್ ಹತ್ಯೆ ಷಡ್ಯಂತ್ರದ ಕೊಲೆ ಅಲ್ಲ. ಅದು ಬೇರೆ ರೀತಿಯ ಕೊಲೆ. ರಾಜಿ ಮಾತುಕತೆಗೆ ಕರೆದು ಕೊಲೆ ಮಾಡಲಾಗಿದೆ. ಅದು ದೇಶದ್ರೋಹದ ಜೊತೆ ಜೋಡಿಸಿಕೊಂಡಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು