10:52 PM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಭಟ್ಕಳ ಸೇರಿದಂತೆ ರಾಜ್ಯದ 3 ಕಡೆ ಎನ್‌ಐಎ ದಾಳಿ: 3 ಮಂದಿ ಶಂಕಿತ ಉಗ್ರರು ವಶಕ್ಕೆ

31/07/2022, 17:15

ಬೆಂಗಳೂರು(reporterkarnataka.com): ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸೇರಿದಂತೆ ರಾಜ್ಯದ 3 ಕಡೆಗಳಿಗೆ ಎನ್‌ಐಎ ದಾಳಿ ನಡೆಸಿದ್ದು, 3 ಮಂದಿ ಶಂಕಿತ ಉಗ್ರರನ್ನು ವಶಕ್ಕೆ ಪಡೆಯಲಾಗಿದೆ.

ಇಂಟೆಲಿಜೆನ್ಸಿ,ಎನ್‌ಐಎ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ನೇತೃತ್ವದಲ್ಲಿ ರಾಜ್ಯದ ಮೂರು ಕಡೆಗಳಲ್ಲಿ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ, ತುಮಕೂರು ಹಾಗೂ ಬೆಳಗಾವಿಯಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಲಾಗಿದೆ. ಮೂವರು ಶಂಕಿತ ಉಗ್ರರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆದರೆ ಇವರೆಲ್ಲಾ ಯಾವ ಸಂಘಟನೆಗೆ ಸೇರಿದ್ದಾರೆ ಅನ್ನೋದು ಇನ್ನೂ ಖಚಿತವಾಗಿಲ್ಲ. 

ರಾಜ್ಯ ಮಾತ್ರವಲ್ಲದೇ ಎನ್‌ಐಎ ಅಧಿಕಾರಿ ಗಳು ಮಧ್ಯಪ್ರದೇಶದ ಭೋಪಾಲ್‌ ಹಾಗೂ ರಾಯ್‌ಸೇನ್ ಜಿಲ್ಲೆ, ಬಿಹಾರದ ಅರರಿಯಾ ಜಿಲ್ಲೆ, ಗುಜರಾತ್‌ ರಾಜ್ಯದ ಬರೂಚಾ, ಸೂರತ್‌, ನವ್‌ಸರಿ ಹಾಗೂ ಅಹಮದಾಬಾದ್‌ ಜಿಲ್ಲೆ, ಉತ್ತರ ಪ್ರದೇಶದ ದಿಯೋಬಾಂಡ್‌ ಜಿಲ್ಲೆ ಹಾಗೂ ಮಹಾರಾಷ್ಟ್ರದ ಕೊಲ್ಲಾಪುರ ಹಾಗೂ ನಾಂದೇಡ್‌ ಜಿಲ್ಲೆಯಲ್ಲಿ ದಾಳಿ ನಡೆಸಲಾಗಿದೆ.

ಭಟ್ಕಳದಲ್ಲಿ ಅರೆಸ್ಟ್‌:  ಐಸಿಸ್‌ ಜತೆ ನಂಟು ಹೊಂದಿರುವ ಶಂಕೆ ಹಿನ್ನೆಲೆ ಎನ್ಐಎ ಅಧಿಕಾರಿಗಳ ತಂಡ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಒಬ್ಬನನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಶಂಕಿತ ಉಗ್ರನನ್ನು ಅಬ್ದುಲ್ ಮಸ್ತಿರ್‌ (30 ) ಎಂದು ಗುರುತಿಸಲಾಗಿದೆ.

ಈತ ಐಎಸ್‍ಐಎಸ್ ಬರಹಗಳನ್ನು ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಕಾರಣಕ್ಕಾಗಿ ಅಬ್ದುಲ್ ಮಸ್ತಿರನನ್ನು ಭಟ್ಕಳ ನಗರದ ಅರ್ಬನ್ ಬ್ಯಾಂಕ್ ಬಳಿ ಇರುವ ಆತನ ಮನೆಯಿಂದ ಎನ್‍ಐಎ ತಂಡ ವಶಕ್ಕೆ ಪಡೆದಿದೆ.

ಪ್ರಾಥಮಿಕ ಮಾಹಿತಿಯಂತೆ ಈತ ಭಟ್ಕಳ ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂಬ ಆರೋಪವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು