7:38 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಬಾಹ್ಯಾಕಾಶಕ್ಕೆ ಜಿಗಿಯಲಿದೆ ವಿದ್ಯಾರ್ಥಿನಿಯರು ತಯಾರಿಸಿದ ಪುಟ್ಟ ಸ್ಯಾಟಲೈಟ್..!: ಇದರ ತೂಕ ಎಷ್ಟು ಗೊತ್ತೇ?

31/07/2022, 18:39

ಹೊಸದಿಲ್ಲಿ(reporterkarnataka.com): ದೇಶದಲ್ಲಿ ಪ್ರಪ್ರಥಮ ಬಾರಿಗೆ ವಿವಿಧ ಶಾಲೆಗಳ ವಿದ್ಯಾರ್ಥಿನಿಯರು ಸೇರಿಕೊಂಡು ತಯಾರಿಸಿದ ಪುಟ್ಟ ಉಪಗ್ರಹವೊಂದು ಬಾಹ್ಯಾಕಾಶಕ್ಕೆ ಜಿಗಿಯಲು ಸಿದ್ಧತೆ ನಡೆಸಿದೆ. ದೇಶದ 75 ಶಾಲೆಗಳ 750 ವಿದ್ಯಾರ್ಥಿನಿಯರು ಸೇರಿ ತಯಾರಿಸಿರುವ ಪುಟಾಣಿ ಉಪಗ್ರಹ ಇದಾಗಿದೆ.

ಈ ಉಪಗ್ರಹವು ಕೇವಲ 8 ಕೆ.ಜಿ ತೂಕ ಹೊಂದಿದ್ದು, ತನ್ನದೇ ಸೌರ ಫಲಕ, ದೀರ್ಘ ವ್ಯಾಪ್ತಿಯ ಸಂವಹನ ಸಲಕರೆಣೆ, ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇದರ ಜೀವಿತಾವಧಿ ಮಾತ್ರ 6 ತಿಂಗಳುಗಳಾಗಿವೆ.

ವಿಶ್ವಸಂಸ್ಥೆಯ ’ಬಾಹ್ಯಾಕಾಶದಲ್ಲಿ ಮಹಿಳೆಯರು’ ಎಂಬ ವಿಷಯದ ಆಧಾರದಲ್ಲಿ ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಉಪಗ್ರಹ ನಿರ್ಮಾಣವಾಗಿದೆ ಎಂದು ಮುಖ್ಯ ತಂತ್ರಜ್ಞಾನ ಅಧಿಕಾರಿ ರಿಫಾತ್ ಶಾರೂಕ್ ತಿಳಿಸಿದ್ದಾರೆ.

75ನೇ ಸ್ವಾತಂತ್ರ್ಯೋತ್ಸವದ ಸ್ಮರಣಾರ್ಥ ಈ ಉಪಗ್ರಹವು ಮುಂದಿನ ತಿಂಗಳ ಆರಂಭದಲ್ಲಿ ಇಸ್ರೋನ ಸಣ್ಣ ಉಪಗ್ರಹ ಉಡಾವಣೆ ನೌಕೆ ಎಸ್‌ಎಸ್‌ಎಲ್‌ವಿ ಮೂಲಕ ಉಡಾವಣೆಯಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು