8:55 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಸಹಾಯಕತೆ: ಖಾಸಗಿ ಶಾಲೆಗಳ ಫೀಸ್ ಮಾಫಿಯಾಕ್ಕೆ ಕುಮ್ಮಕ್ಕು?

22/06/2021, 17:57

ರಾಜೀವಿಸುತ ಬೆಂಗಳೂರು

info.reporterkarnataka@gmail.com

ಮಾನ್ಯ ಶಿಕ್ಷಣ ಸಚಿವರೇ, ನಿಮ್ಮ ಮೇಲೆ‌ ಇರುವ ಗೌರವದಿಂದಲೇ ಈ ಮಾತುಗಳನ್ನು ಬರೆಯುತ್ತಿದ್ದೇನೆ. 

ಕಳೆದ ಎರಡು ವರ್ಷಗಳಿಂದ ಸಂಬಳವನ್ನೇ ಪಡೆಯದೆ ಅಥವಾ 3-4 ಸಾವಿರ ರೂಗಳ ಅರ್ಧ ಸಂಬಳ ತೆಗದುಕೊಳ್ಳುತ್ತಿರುವ ಶಿಕ್ಷಕರು ಒಂದು ಕಡೆಯಾದರೆ , ಇನ್ನೊಂದು ಕಡೆ ಫೀಸ್ ಕಟ್ಟಲು ಪರದಾಡುತ್ತಿರುವ ಪೋಷಕರು ನಿಮ್ಮ ಕಣ್ಣ ಎದುರೇ ಇದ್ದಾರೆ. ಇಬ್ಬರಿಗೂ ಆ ನಿಮ್ಮ‌ ‘ಅಡ್ಡಗೋಡೆಯ ಮೇಲಿನ ದೀಪದ’ ಮಾತುಗಳು‌ ಪರಿಹಾರ ಅಥವಾ ಭವಿಷ್ಯದ ಭಯವನ್ನು ಹೋಗಲಾಡಿಸಲಾರವು.  ಸದ್ಯದ ಪರಿಸ್ಥಿತಿಯನ್ನು ನೀವು  ಈ “ಅಸಹಾಯಕತೆಯ ದೃಷ್ಟಿ”ಯಲ್ಲಿ ನೋಡುವ ಬಗೆಯೇ ನಿಜಕ್ಕೂ‌ ದುರಂತ. ನಿಮ್ಮ ಈ ಸೌಜನ್ಯದ ಮಾತುಗಳು ಹೆಚ್ಚು ಖಾಸಗಿ ಶಾಲೆಗಳ‌ ಕಡೆಗೆ ವಾಲಿರುವಂತೆ ಕಾಣಿಸುತ್ತಿವೆ. ಅಧಿಕಾರದಲ್ಲಿರುವವರು ಅಸಹಾಯಕತೆಯ ಮಾತುಗಳನ್ನಾಡಿದರೆ ಸಾಮಾನ್ಯ ಜನರು ಕಂಗಾಲಾಗುತ್ತಾರೆ. ಜೊತೆಗೆ ಖಾಸಗಿ ಶಾಲೆಗಳ‌ ಫೀಸ್ ಮಾಫಿಯಾಗೆ ಸರ್ಕಾರವೇ ಕುಮ್ಮಕ್ಕು ನೀಡಿದಂತಾಗುತ್ತದೆ.

ಇನ್ನು ನಿಮ್ಮ ಇಡೀ ಬರಹದಲ್ಲಿ ನೀವು ಶುಲ್ಕದ‌ ಬಗ್ಗೆ ಮಾತನಾಡುವಾಗ “ಆರ್ಥಿಕವಾಗಿ ತುಂಬಾ ತೊಂದರೆ ಇರುವವರಿಗೆ ನಮ್ಮ ಸರ್ಕಾರಿ ಶಾಲೆಗಳಿವೆ, ನಾನು ನಿಮಗೆ ಅತ್ಯುತ್ತಮ ಶಿಕ್ಷಣದ ಭರವಸೆ ಕೊಡುವೆ” ಎಂದು ಹೇಳಲೇ ಇಲ್ಲ ಎಂಬುದು ಮತ್ತೂ ಖೇದದ ವಿಷಯ. ಸರ್ಕಾರಿ ಶಾಲೆಗಳ ಮೇಲೆ ಸ್ವತಃ ನಿಮಗೇ ನಂಬಿಕೆ ಇಲ್ಲವೇ?. 

ಈಗಲಾದರೂ ಸರಕಾರಿ ಶಾಲೆಯಲ್ಲಿ ಬರೀ ಬಿಸಿಯೂಟ, ಉಚಿತ ಸೈಕಲ್, ಹಾಲು ಮೊಟ್ಟೆ , ಯೂನಿಫಾರಂ , ಶೂ ಮಾತ್ರವಲ್ಲದೇ ಸ್ವಲ್ಪ ಗುಣಮಟ್ಟದ ಶಿಕ್ಷಣವನ್ನು ಕೊಡುವತ್ತ ಗಮನಹರಿಸಿ ಖಾಸಗಿ ಶಾಲೆಗಳ ಜೊತೆಗೆ ಪೈಪೋಟಿ‌ ಕೊಡುವ ವಾತಾವರಣ ನಿರ್ಮಿಸಿ.‌ ಎಲ್ಲೆಲ್ಲಿಯೋ ಕೋಟಿಗಟ್ಟಲೆ ಹಣವನ್ನು ವ್ಯರ್ಥ ಮಾಡುವ ಸರ್ಕಾರ , ಕನಿಷ್ಟ ಸರ್ಕಾರಿ‌ ಶಾಲೆಗಳ ಕಟ್ಟಡಗಳನ್ನು ಉದ್ದದ ರೈಲ್ವೆಬೋಗಿಯಂತೆ‌ ಇರುವ ತರಗತಿಗಳನ್ನು ಸುಂದರವಾಗಿ ಅಚ್ಚುಕಟ್ಟಾಗಿ ಕಾಣುವಂತೆ ನಿರ್ಮಾಣ ಮಾಡುವತ್ತ ಗಮನಹರಿಸಲಿ. ಆಗ ಪೋಷಕರೇ ಸರ್ಕಾರದ ಶಾಲೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಲು ಮುಂದಾಗುತ್ತಾರೆ.

ಇನ್ನಾದರೂ ದ್ವಂದ್ವ ನಿಲುವುಗಳನ್ನು ತೆಗೆದುಕೊಳ್ಳದೆ ನಿಮ್ಮ ನಿಲುವುಗಳು ಸೃಷ್ಟವಾಗಿರಲಿ. “ಹಾವು ಸಾಯಬಾರದು ಕೋಲು ಮುರಿಯಬಾರದು” ಎಂಬ ನೀತಿ ಬಹಳ ದಿನ ಫಲ‌ ನೀಡದು ಮತ್ತು ತಮ್ಮಂಥ ಸಜ್ಜನರಿಗೆ ಅದು ಶೋಭೆಯೂ ಅಲ್ಲ.

(ಇದು ನೊಂದ ಸಾರ್ವಜನಿಕರೊಬ್ಬರು ರಿಪೋರ್ಟರ್ ಕರ್ನಾಟಕಕ್ಕೆ ಬರೆದ ಪತ್ರ)

ಇತ್ತೀಚಿನ ಸುದ್ದಿ

ಜಾಹೀರಾತು