12:04 AM Monday22 - September 2025
ಬ್ರೇಕಿಂಗ್ ನ್ಯೂಸ್
ಮುಂದಿನ ಒಲಂಪಿಕ್ಸ್ ಪದಕ ವಿಜೇತರಿಗೆ ಸರ್ಕಾರದಿಂದ 6 ಕೋಟಿ ನಗದು ಬಹುಮಾನ: ಮುಖ್ಯಮಂತ್ರಿ… ಜಿಎಸ್ ಟಿ ಜಾರಿ ಮಾಡಿದ್ದೂ ಮೋದಿ, ಜಿಎಸ್ ಟಿ ಹೆಚ್ಚೆಚ್ಚು ವಿಧಿಸಿದ್ದೂ ಮೋದಿಯವರೇ,… ಅಂತಾರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ಜಾಗೃತಿ: ಬೆಂಗಳೂರು ಇಸ್ಕಾನ್ ದೇವಾಲಯಕ್ಕೆ ಚಿನ್ನದ ಬಣ್ಣದ ಬೆಳಕು ನವೆಂಬರ್ ನಿಂದ ಮಾಹಿತಿ ಹಕ್ಕು ಅದಾಲತ್: ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ ಪಿಡಿಒ ಜೇಷ್ಠಾತಾ ಪಟ್ಟಿ ನ್ಯಾಯಸಮ್ಮತವಾಗಿ ಅಂತಿಮಗೊಳಿಸಲು ಸೂಕ್ತ ಕ್ರಮ: ಸಚಿವ ಪ್ರಿಯಾಂಕ್‌ ಖರ್ಗೆ ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದವರೇ ಆಗಿದ್ದಾರೆ: ಸಿಎಂ… ವಿರಾಜಪೇಟೆ ಆರೆಂಜ್ ಸ್ಪಾ -ಬ್ಯೂಟಿ ಪಾರ್ಲರ್ ದಾಳಿ ಪ್ರಕರಣ: ನಾಲ್ವರು ಪ್ರಮುಖ ಆರೋಪಿಗಳ… Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್…

ಇತ್ತೀಚಿನ ಸುದ್ದಿ

ಬಣಕಲ್ ಹೋಬಳಿಯ ಗ್ರಾಮಗಳಿಗೆ ಕೊನೆಗೂ ಬಂತು ಬಸ್!: ಸ್ವಾತಂತ್ರ್ಯ ಬಂದು 75 ವರ್ಷಗಳ ಬಳಿಕ ಸಾರಿಗೆ ಭಾಗ್ಯ!!

01/08/2022, 20:24

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮ 75ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ಸನ್ನ ಕಂಡಿರೋ ಸಂತಸದ ಸುದ್ದಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯವೇ ಇರಲಿಲ್ಲ. ಈ ಭಾಗದಲ್ಲಿ ಸುಮಾರು 250ಕ್ಕೂ ಹೆಚ್ಚು ಕುಟುಂಗಳು ವಾಸವಿವೆ. ಬಣಕಲ್ ಹೋಬಳಿಗೆ ಬರಲು ಈ ಗ್ರಾಮಗಳ ಜನ ಸುಮಾರು 5-7 ಕಿ.ಮೀ. ನಡೆದೇ ಬರಬೇಕಿತ್ತು. ಶಾಲಾ-ಕಾಲೇಜಿಗೆ ಹೋಗುವ ಮಕ್ಕಳು ಕೂಡ 5-7 ಕಿ.ಮೀ. ನಡೆದೇ ಬರಬೇಕಿತ್ತು.


ಇದೀಗ ಸ್ಥಳಿಯರ ದಶಕಗಳ ಮನವಿ ಮೇರೆಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಈ ಗ್ರಾಮಗಳಿಗೆ ಬಸ್ಸನ್ನ ಬಿಟ್ಟಿದ್ದಾರೆ. ದಿನಕ್ಕೆ ಎರಡು ಬಾರಿ ಓಡಾಡುವ ಬಸ್ಸು ಬೆಳಗ್ಗೆ-ಸಂಜೆ ಈ ಹಳ್ಳಿಗಳಿಗೆ ಹೋಗಿ ಬರಲಿದೆ. ಈ ಬಸ್ ಸ್ಥಳಿಯರ ಜೊತೆ ಹೆಚ್ಚಾಗಿ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ. ಈ ಹಳ್ಳಿಗಳಿಗೆ ರಸ್ತೆ ಕೂಡ ಸರಿ ಇರಲಿಲ್ಲ. ಇದೀಗ ಎರಡು ಕೋಟಿ ವೆಚ್ಚದಲ್ಲಿ ರಸ್ತೆ ಕೂಡ ನಿರ್ಮಾಣವಾಗಿ, ಹಳ್ಳಿಗಳಿಗೆ ಬಸ್ ಸೌಲಭ್ಯ ಸಿಕ್ಕಿರೋದ್ರಿಂದ ಹಳ್ಳಿಗರು ಖುಷಿಪಟ್ಟಿದ್ದಾರೆ. ಇಂದು ಬಸ್ಸನ್ನ ಉದ್ಘಾಟಿಸಿದ ಶಾಸಕ ಕುಮಾರಸ್ವಾಮಿ ಅದೇ ಬಸ್ಸಿನಲ್ಲಿ ಮತ್ತಿಕಟ್ಟೆ ಗ್ರಾಮದಿಂದ ಬಣಕಲ್‍ವರೆಗೂ ಸ್ಥಳಿಯರ ಜೊತೆಯೇ ಸಂಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು