7:50 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಗರ ಚೌತಿ ಪ್ರಯುಕ್ತ ಮನೆ ಮನೆಗಳಲ್ಲಿ, ದೇಗುಲಗಳಲ್ಲಿ ನಾಗರ ಮೂರ್ತಿಗೆ ಹಾಲೆರೆದ ಭಕ್ತರ ದಂಡು

01/08/2022, 20:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಾಗರ ಚೌತಿ  ಪ್ರಯುಕ್ತ ನಾಗರ ಮೂರ್ತಿಗೆ ಆಸ್ತಿಕರು ಹಾಲೆರೆಯೋ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. 

ಪಟ್ಟಣದ ಶ್ರೀಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ನಾಗದೇವತೆಯ ಮೂರ್ತಿಗೆ ಭಕ್ತರು ಹಾಲೆರದು ಭಕ್ತಿ ಮೆರೆದರು. ಹಲವರು ತಮ್ಮ ಮನೆಯ ದೇವರ ಜಗುಲಿಯಲ್ಲಿ ನಾಗರ ದೇವರ ಮೂರ್ತಿ ಪ್ರತಿಷ್ಠಾಪಿಸಿ, ನಾಗರ ಮೂರ್ತಿಗೆ ಭಕ್ತಿಯಿಂದ ಹಾಲೆರು ಹಬ್ಬ ಆಚರಿಸಿದರು. ಕೆಲವರು ನಾಗರ ಚೌತಿಯಂದು ಹಾಲೆರದು ಹಬ್ಬ ಆಚರಿಸಿದೆರೆ ಉಳಿದವರು ನಾಗ ಪಂಚಮಿಯಂದು ಹಾಲೆರೆದು ಹಬ್ಬ ಆಚರಿಸುತ್ತಾರೆ. ಕುಟುಂಬ ಸಮೇತರಾಗಿ ಬಂಧು ಬಳಗದೊಂದಿಗೆ ಸಾಮೂಹಿಕವಾಗಿ ಹಾಲೆರೆಯೋ ಸಾಂಪ್ರದಾಯ, ಅವಿಭಕ್ತ ಕುಟುಂಬದಲ್ಲಿ ಈಗಲೂ ಕಾಣಬಹುದಾಗಿದೆ. ಅವಿಭಕ್ತ ಕುಟುಂಬ ಕಾಣೆಯಾಗೋ ಸಂದರ್ಭದಲ್ಲಿ, ವಿಭಕ್ತ ಕುಟುಂಬದ ಸದಸ್ಯರು ಮನೆಯಲ್ಲಿಯೆರ ನಾಗದೇವರ ಆರಾಧನೆ ಮಾಡೋದು ಇತ್ತೀಚೆಗೆ ಸಮಾನ್ಯವಾಗಿದೆ. ನಾಗರ ಪಂಚಮಿ ಪ್ರಯುಕ್ತ ಪಟ್ಟಣ ಸೇರಿದಂತೆ ,ತಾಲೂಕಿನೆಲ್ಲೆಡೆ ನಾಗ ದೇವರಾಧನೆ ಜರುಗಿದೆ. ಮಕ್ಕಳು, ಯುವಕ ಯುವತಿಯರು, ಮಹಿಳೆಯರು, ನಾಗರ ಪಂಚಮಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು. ಅಂತೆಯೇ ಪಟ್ಟಣದ ಶ್ರೀಬಸವ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ನಾಗ ಪ್ರತಿಮೆಗೆ, ಹಾಗೂ ತಮ್ಮ ಮನೆಯ ದೇವರ ಜಗುಲಿಯಲ್ಲಿರುವ ನಾಗ ಪ್ರತಿಮೆಗೆ. ಪುಟಾಣಿ ಅರಣಿ ತನ್ನ ತಾಯಿ ರೇಣುಕಾ ಹಾಗೂ ಸಹೋದರ ವಿನಾಯಕನೊಂದಿಗೆ ನಾಗದೆವತೆಗೆ ಶಾಸ್ತ್ರೋಕ್ತವಾಗಿ ಪೂಜೆಗೈದು ಶ್ರದ್ಧಾ ಭಕ್ತಿಯಿಂದ ಹಾಲೆರದು, ತಮ್ಮ  ಭಕ್ತಿ ಸಮರ್ಪಿಸಿ ಹಬ್ಬಕ್ಕೆ ಮತ್ತಷ್ಟು ಮೆರೆಗುತಂದಿದ್ದಾಳೆ. 

ಇತ್ತೀಚಿನ ಸುದ್ದಿ

ಜಾಹೀರಾತು