9:32 AM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೂಡ್ಲಿಗಿ: ನಾಗರ ಚೌತಿ ಪ್ರಯುಕ್ತ ಮನೆ ಮನೆಗಳಲ್ಲಿ, ದೇಗುಲಗಳಲ್ಲಿ ನಾಗರ ಮೂರ್ತಿಗೆ ಹಾಲೆರೆದ ಭಕ್ತರ ದಂಡು

01/08/2022, 20:30

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಾಗರ ಚೌತಿ  ಪ್ರಯುಕ್ತ ನಾಗರ ಮೂರ್ತಿಗೆ ಆಸ್ತಿಕರು ಹಾಲೆರೆಯೋ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. 

ಪಟ್ಟಣದ ಶ್ರೀಬಸವಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ನಾಗದೇವತೆಯ ಮೂರ್ತಿಗೆ ಭಕ್ತರು ಹಾಲೆರದು ಭಕ್ತಿ ಮೆರೆದರು. ಹಲವರು ತಮ್ಮ ಮನೆಯ ದೇವರ ಜಗುಲಿಯಲ್ಲಿ ನಾಗರ ದೇವರ ಮೂರ್ತಿ ಪ್ರತಿಷ್ಠಾಪಿಸಿ, ನಾಗರ ಮೂರ್ತಿಗೆ ಭಕ್ತಿಯಿಂದ ಹಾಲೆರು ಹಬ್ಬ ಆಚರಿಸಿದರು. ಕೆಲವರು ನಾಗರ ಚೌತಿಯಂದು ಹಾಲೆರದು ಹಬ್ಬ ಆಚರಿಸಿದೆರೆ ಉಳಿದವರು ನಾಗ ಪಂಚಮಿಯಂದು ಹಾಲೆರೆದು ಹಬ್ಬ ಆಚರಿಸುತ್ತಾರೆ. ಕುಟುಂಬ ಸಮೇತರಾಗಿ ಬಂಧು ಬಳಗದೊಂದಿಗೆ ಸಾಮೂಹಿಕವಾಗಿ ಹಾಲೆರೆಯೋ ಸಾಂಪ್ರದಾಯ, ಅವಿಭಕ್ತ ಕುಟುಂಬದಲ್ಲಿ ಈಗಲೂ ಕಾಣಬಹುದಾಗಿದೆ. ಅವಿಭಕ್ತ ಕುಟುಂಬ ಕಾಣೆಯಾಗೋ ಸಂದರ್ಭದಲ್ಲಿ, ವಿಭಕ್ತ ಕುಟುಂಬದ ಸದಸ್ಯರು ಮನೆಯಲ್ಲಿಯೆರ ನಾಗದೇವರ ಆರಾಧನೆ ಮಾಡೋದು ಇತ್ತೀಚೆಗೆ ಸಮಾನ್ಯವಾಗಿದೆ. ನಾಗರ ಪಂಚಮಿ ಪ್ರಯುಕ್ತ ಪಟ್ಟಣ ಸೇರಿದಂತೆ ,ತಾಲೂಕಿನೆಲ್ಲೆಡೆ ನಾಗ ದೇವರಾಧನೆ ಜರುಗಿದೆ. ಮಕ್ಕಳು, ಯುವಕ ಯುವತಿಯರು, ಮಹಿಳೆಯರು, ನಾಗರ ಪಂಚಮಿಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಿದರು. ಅಂತೆಯೇ ಪಟ್ಟಣದ ಶ್ರೀಬಸವ ಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ನಾಗ ಪ್ರತಿಮೆಗೆ, ಹಾಗೂ ತಮ್ಮ ಮನೆಯ ದೇವರ ಜಗುಲಿಯಲ್ಲಿರುವ ನಾಗ ಪ್ರತಿಮೆಗೆ. ಪುಟಾಣಿ ಅರಣಿ ತನ್ನ ತಾಯಿ ರೇಣುಕಾ ಹಾಗೂ ಸಹೋದರ ವಿನಾಯಕನೊಂದಿಗೆ ನಾಗದೆವತೆಗೆ ಶಾಸ್ತ್ರೋಕ್ತವಾಗಿ ಪೂಜೆಗೈದು ಶ್ರದ್ಧಾ ಭಕ್ತಿಯಿಂದ ಹಾಲೆರದು, ತಮ್ಮ  ಭಕ್ತಿ ಸಮರ್ಪಿಸಿ ಹಬ್ಬಕ್ಕೆ ಮತ್ತಷ್ಟು ಮೆರೆಗುತಂದಿದ್ದಾಳೆ. 

ಇತ್ತೀಚಿನ ಸುದ್ದಿ

ಜಾಹೀರಾತು