5:38 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

3 ವರ್ಷ ಕಳೆದರೂ ಪುನರ್ವಸತಿ ಕಲ್ಪಿಸದ ಸರಕಾರ: ಸೂರಿನ ನಿರೀಕ್ಷೆಯಲ್ಲೇ ಕೊನೆಯುಸಿರೆಳೆದ ಮಹಾಮಳೆ ಸಂತ್ರಸ್ತ!!

01/08/2022, 22:50

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ.

ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು. ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.

ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದ ನಾರಾಯಣ ಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ  ಜಾಗ ಹಾಗೂ ಪರ್ಯಾಯ ಕೃಷಿಭೂಮಿಯ ನಿರೀಕ್ಷೆಯಲ್ಲಿದ್ದರು. ಆದರೆ 3 ವರ್ಷ ಕಳೆದರೂ ಸರ್ಕಾರ ಪುನರ್ವಸತಿ ಕಲ್ಪಿಸದೇ ಇರುವುದರಿಂದ ಆ ಕೊರಗಿನಲ್ಲಿ ಜೀವನ ಸಾಗಿಸುತ್ತಿದ್ದರು.

2019 ರಲ್ಲಿ ತಲೆಮಾರುಗಳಿಂದ ಬದುಕಿದ್ದ ಮನೆ ಕೊಚ್ಚಿ ಹೋದಾಗ ಆಘಾತಕ್ಕೆ ಒಳಗಾಗಿ ಪಾಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಸ್ವಂತ ಮನೆಯ ನಿರೀಕ್ಷೆಯಲ್ಲಿಯೇ ನಾರಾಯಣ ಗೌಡ ಅವರು ಸೋಮವಾರ ಸಂಜೆ ಮೂಡಿಗೆರೆಯ ಬಾಡಿಗೆ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲೆಮನೆ ಗ್ರಾಮಕ್ಕೆ ತೆಗೆದುಕೊಂಡು ಹೋದರೂ ಅಂತಿಮ ದರ್ಶನಕ್ಕೆ ಮೃತದೇಹವನ್ನು ಇಡಲು ಮನೆಯೂ ಕೂಡ ಇಲ್ಲದಂತಾಗಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು