2:38 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

02/08/2022, 10:55

ಕಾಬೂಲ್(reporterkarnataka.com):
ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ.

ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಕೊಂದಿದೆ ಎಂದು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ ಬಿಡೆನ್ ಅವರು, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟ್ರೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ಭಯೋತ್ಪಾದಕ ನಾಯಕ ಇನ್ನಿಲ್ಲ ಎಂದು ಹೇಳಿದರು.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸ್ಟೇಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು