3:16 AM Thursday12 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

02/08/2022, 10:55

ಕಾಬೂಲ್(reporterkarnataka.com):
ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ.

ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಕೊಂದಿದೆ ಎಂದು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ ಬಿಡೆನ್ ಅವರು, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟ್ರೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ಭಯೋತ್ಪಾದಕ ನಾಯಕ ಇನ್ನಿಲ್ಲ ಎಂದು ಹೇಳಿದರು.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸ್ಟೇಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು