6:34 AM Sunday13 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

02/08/2022, 10:55

ಕಾಬೂಲ್(reporterkarnataka.com):
ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ.

ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಕೊಂದಿದೆ ಎಂದು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ ಬಿಡೆನ್ ಅವರು, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟ್ರೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ಭಯೋತ್ಪಾದಕ ನಾಯಕ ಇನ್ನಿಲ್ಲ ಎಂದು ಹೇಳಿದರು.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸ್ಟೇಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು