11:53 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಡ್ರೋನ್ ದಾಳಿ: ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ನಾಯಕ ಅಯ್ಮನ್ ಅಲ್ ಜವಾಹಿರಿ ಹತ್ಯೆ

02/08/2022, 10:55

ಕಾಬೂಲ್(reporterkarnataka.com):
ಅಫ್ಘಾನಿಸ್ತಾನದಲ್ಲಿ ಸಿಐಎ ನಡೆಸಿದ ಡ್ರೋನ್ ದಾಳಿಯಲ್ಲಿ ಅಲ್ ಖೈದಾ ನಾಯಕ ಅಯ್ಮನ್ ಅಲ್-ಜವಾಹಿರಿ ಸಾವನ್ನಪ್ಪಿದ್ದಾನೆ.

ಟ್ವಿಟರ್‌ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಸ್ಟ್ರೈಕ್ ನಡೆದಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ವಾಯುದಾಳಿ ನಡೆಸಲಾಯಿತು ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ ತತ್ವಗಳು ಮತ್ತು ದೋಹಾ ಒಪ್ಪಂದದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಜಾಹಿದ್ ಹೇಳಿದರು.

ಅಧ್ಯಕ್ಷ ಜೋ ಬಿಡೆನ್ ಸೋಮವಾರ ಈ ಬಗ್ಗೆ ಘೋಷಿಸಿದ್ದು, ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬರಾಗಿದ್ದ ಮತ್ತು ಸೆಪ್ಟೆಂಬರ್ 11, 2001 ರ ದಾಳಿಯ ಶಂಕಿತ ಮಾಸ್ಟರ್ ಮೈಂಡ್ ಆಗಿದ್ದ ಅಲ್-ಖೈದಾ ಮುಖ್ಯಸ್ಥ ಅಯ್ಮನ್ ಅಲ್-ಜವಾಹಿರಿಯನ್ನು ಯುನೈಟೆಡ್ ಸ್ಟೇಟ್ಸ್ ಕೊಂದಿದೆ ಎಂದು ಹೇಳಿದ್ದಾರೆ.

ದೂರದರ್ಶನದ ಭಾಷಣದಲ್ಲಿ ಬಿಡೆನ್ ಅವರು, ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ಶನಿವಾರ ಸ್ಟ್ರೈಕ್ ನಡೆಸಲಾಯಿತು. ಯಾವುದೇ ನಾಗರಿಕ ಸಾವುನೋವುಗಳು ಸಂಭವಿಸಿಲ್ಲ. ಭಯೋತ್ಪಾದಕ ನಾಯಕ ಇನ್ನಿಲ್ಲ ಎಂದು ಹೇಳಿದರು.

ಅಲ್ ಖೈದಾ ನಾಯಕ ಅಯ್ಮಾನ್ ಅಲ್-ಜವಾಹಿರಿ ಹತ್ಯೆಯ ಕುರಿತು ಯುಎಸ್ ಅಧ್ಯಕ್ಷ ಜೋ ಬಿಡೆನ್ ಅವರ ಘೋಷಣೆಯನ್ನು ಸೌದಿ ಅರೇಬಿಯಾ ಸ್ವಾಗತಿಸಿದೆ ಎಂದು ವಿದೇಶಾಂಗ ಸಚಿವಾಲಯದ ಹೇಳಿಕೆಯನ್ನು ಉಲ್ಲೇಖಿಸಿ ಸ್ಟೇಟ್ ಸುದ್ದಿ ಸಂಸ್ಥೆ ಸೋಮವಾರ ತಡರಾತ್ರಿ ವರದಿ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು