1:21 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಮಾಜಿ ಮುಖ್ಯಮಂತ್ರಿ ಸಿದ್ದು ಬರ್ತ್ ಡೇ ಸ್ಪೆಷಲ್ : ತರೀಕೆರೆಯಲ್ಲಿ 75 ಕೆಜಿ ತೂಕದ ಕೇಕ್ ಕಟ್!!

02/08/2022, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ಸಿದ್ದು ಅಭಿಮಾನಿಗಳು 75 ಕೆಜಿ ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯನವರಿಗೆ ಶುಭ ಕೋರಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. 


ತರೀಕೆರೆ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗೋಪಿಕುಮಾರ್ ಇಂದು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಬರುವ ತರೀಕೆರೆ ಪಟ್ಟಣದ ಗಾಂಧಿ ವೃತ್ತದಲ್ಲಿ 75 ಕೆ.ಜಿ. ತೂಕದ ಕೇಕ್ ಕತ್ತರಿಸಿ ಸಿದ್ದರಾಮಯ್ಯ ಅವರಿಗೆ ಶುಭಕೋರಿದ್ದಾರೆ. ಇದೇ ವೇಳೆ, ಸಿದ್ದು ಹುಟ್ಟುಹಬ್ಬದ ಅಂಗವಾಗಿ ತರೀಕೆರೆ ಪಟ್ಟಣದ ಪಟ್ಟಣ ಪಂಚಾಯಿತಿಯ 23 ಜನ ಸದಸ್ಯರಿಗೂ ಪಕ್ಷಾತೀತವಾಗಿ ಸನ್ಮಾನಿಸಿದ್ದಾರೆ. ಜೊತೆಗೆ ನಾಳೆ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಅಂಗವಾಗಿ ದಾವಣಗೆರೆಯಲ್ಲಿ ನಡೆಯುವ ಸಿದ್ದರಾಮಯ್ಯ ಅಮೃತ ಮಹೋತ್ಸವಕ್ಕೂ ಗೋಪಿಕುಮಾರ್ ಸಾವಿರಕ್ಕೂ ಅಧಿಕ ಜನರನ್ನ ದಾವಣಗೆರೆಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಎರಡು ಬಸ್ ಹಾಗೂ ಎರಡು ಟಿಟಿ ವಾಹನಗಳಲ್ಲಿ ಸಿದ್ದು ಅಭಿಮಾನಿಗಳು ತುಂಬಿದ್ದು ಮತ್ತಷ್ಟು ಜನ ತಮ್ಮ ಸ್ವಂತ ವಾಹನದಲ್ಲಿ ದಾವಣಗೆರೆಗೆ ತೆರಳಲಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಉಮ್ಮರ್ ಫಾರುಕ್, ಮಿರ್ಜಾ ಇಸ್ಮಾಯಿಲ್, ಧರ್ಮರಾಜ್, ಪ್ರಕಾಶ್ ವರ್ಮಾ ಸೇರಿದಂತೆ 250ಕ್ಕೂ ಅಧಿಕ ಜನ ರಸ್ತೆ ಮಧ್ಯೆ ಜಮಾಯಿಸಿ ಸಿದ್ದು ಹುಟ್ಟುಹಬ್ಬ ಆಚರಿಸಿದ್ದಾರೆ. ಇದೇ ವೇಳೆ, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವೇ ಎಂದು ಘೋಷಣೆ ಕೂಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು