9:37 AM Sunday15 - February 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

ಇತ್ತೀಚಿನ ಸುದ್ದಿ

ದಾವಣಗೆರೆ: ಇಂದು ಸಿದ್ದರಾಮೋತ್ಸವ; ಸಿದ್ದು ಬರ್ತ್‌ ಡೇಗೆ 8 ಲಕ್ಷ ಜನ ಆಗಮನ ನಿರೀಕ್ಷೆ

03/08/2022, 10:56

ದಾವಣಗೆರೆ(reporterkarnataka.com): ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬದ ಅದ್ದೂರಿ ಅಮೃತ ಮಹೋತ್ಸವ ಕಾರ್ಯಕ್ರಮ ಇಂದು ನಡೆಯಲಿದ್ದು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಉದ್ಘಾಟಿಸಲಿದ್ದಾರೆ.

ರಾಜ್ಯ ಕಾಂಗ್ರೆಸ್‌ನ ಎಲ್ಲ ನಾಯಕರು ಇದರಲ್ಲಿ ಭಾಗವಹಿಸಲಿದ್ದು, ಸುಮಾರು 6 ರಿಂದ 8 ಲಕ್ಷ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ. ಅಮೃತ ಮಹೋತ್ಸವದ ಮೂಲಕ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಅಧಿಕೃತವಾಗಿ ಬಿಂಬಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

ಏನೆಲ್ಲ ಸ್ಪೆಷಲ್‌:

* 08 ಲಕ್ಷ- ರಾಜ್ಯದ ವಿವಿಧ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವವರು.

*06 ಲಕ್ಷ: ಮೈಸೂರು ಪಾಕ್‌ ತಯಾರಿ.

* 04 ಲಕ್ಷ: ಆಸನಗಳ ವ್ಯವಸ್ಥೆ.

* 35000- ದಾವಣಗೆರೆಗೆ ಆಗಮಿಸಲಿರುವ ಅಂದಾಜು ವಾಹನಗಳು.

*8000- ಅಭಿಮಾನಿಗಳನ್ನು ಕರೆತರುವ ಬಸ್‌ಗಳ ಸಂಖ್ಯೆ.

* 400: ಕೌಂಟರ್‌ಗಳಲ್ಲಿ ಬಫೆ ಊಟಕ್ಕೆ ವ್ಯವಸ್ಥೆ.

* 2500- ಬಾಣಸಿಗರಿಂದ ಮೊಸರನ್ನು-ಪಲಾವ್‌ ತಯಾರಿ.

* 300- ವೇದಿಕೆ ಆವರಣದಲ್ಲಿರುವ ಸ್ವಯಂ ಸೇವಕರು.

ಇಷ್ಟೇ ಅಲ್ಲ, 5 ಲಕ್ಷ ಮಂದಿಗೆ ಪಲಾವ್, ಮೊಸರನ್ನ ಹಾಗೂ ಸಿಹಿ ತಿಂಡಿಯ ಭೋಜನ ವ್ಯವಸ್ಥೆ, 6 ಲಕ್ಷ ಮಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದ್ದು, ಮಳೆ ಬಂದರೆ ಸಮಸ್ಯೆ ಆಗದಂತೆ ಪೆಂಡಾಲ್ ವ್ಯವಸ್ಥೆ ಕೂಡ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು